ರಿಪ್ಪನ್ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ.
11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಪ್ರಧಾನ ಕಾರ್ಯದರ್ಶಿ ನಾಗಾರ್ಜುನಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷರು, ಗ್ರಾಪಂ ಸದಸ್ಯರು ಇನ್ನಿತರರು ಹಾಜರಿದ್ದರು.
Related