ಬಿರುಗಾಳಿ ಸಹಿತ ಭಾರಿ ಮಳೆ, ಸಿಡಿಲು ಬಡಿದು ವ್ಯಕ್ತಿ ಸಾವು !

0 714

ಶಿವಮೊಗ್ಗ : ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ಶಿವಮೊಗ್ಗ ನಗರ ಸೇರಿದಂತೆ ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕಿನ ಹಲವೆಡೆ ಸಹ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದು, ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದ ರಾಕೇಶ್ (28) ಮೃತ ದುರ್ಧೈವಿ.

ರುದ್ರೇಶ್

ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಬರುವಾಗ ಈ ಘಟನೆ ನಡೆದಿದೆ. ಇವರ‌ ಜೊತೆಯಿದ್ದ ಮತ್ತೋರ್ವ ರುದ್ರೇಶ ಬಿನ್ ಸಿದ್ದಪ್ಪ ಎಂಬುವರಿಗೆ ಸಿಡಿಲು ಬಡಿದು ತಮ್ಮ ಎರಡು ಕಾಲಗಳ ಸ್ವಾಧೀನತೆ ಕಳೆದುಕೊಂಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಶನಿವಾರ ಬೆಳಗ್ಗೆಯೂ ತೀರ್ಥಹಳ್ಳಿ, ಹೊಸನಗರ, ಸಾಗರ, ಭದ್ರಾವತಿ, ಶಿವಮೊಗ್ಗ ಸೇರಿ ಹಲವು ಕಡೆ ಸಿಡಿಲಬ್ಬರದಿಂದ ಕೂಡಿದ ಮಳೆಯಾಗುತ್ತಿದೆ.

Leave A Reply

Your email address will not be published.

error: Content is protected !!