ಹೊಸನಗರ: ತಾಲ್ಲೂಕಿನ ನಗರ ಚಿಕ್ಕಪೇಟೆ ಸರ್ಕಲ್ನಲ್ಲಿ ಭಾನುವಾರ ಮಹಡಿಯಿಂದ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮುಂಡಳ್ಳಿ ನಿವಾಸಿ ರಾಜು ಶೆಟ್ಟಿ (68) ಮೃತಪಟ್ಟ ದುರ್ದೈವಿಯಾಗಿದ್ದು, ಕ್ಷೌರ ಮಾಡಿಸಲು ಮಹಡಿ ಮೇಲೆ ಹೋಗುವಾಗ ಕಾಲುಜಾರಿ 12 ಅಡಿ ಕೆಳಗೆ ಬಿದ್ದಿದ್ದಾರೆ.
ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ತಲೆಗೆ ಪೆಟ್ಟು ಬಿದ್ದಿದ್ದರಿಂದ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.