ಶಿವಮೊಗ್ಗ: ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಮುಂದುವರೆಸಲಾಗಿದೆ.
ಜಿಲ್ಲಾಧಿಕಾರಿಗಳು ಶಿವಮೊಗ್ಗ ರವರ ಆದೇಶದನ್ವಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಮೂರು ತಾಲ್ಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜು.07ರಂದು ಗುರುವಾರ ರಜೆ ಘೋಷಿಸಲಾಗಿದೆ ಎಂದು ಶಿವಮೊಗ್ಗ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಉಪನಿರ್ದೇಶಕರು (ಆಡಳಿತ ) ತಿಳಿಸಿದ್ದಾರೆ.
Related