ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮ ಸಮಾರಂಭ | ಧಾರ್ಮಿಕ ಆಚರಣೆಗಳಿಂದ ಮನುಷ್ಯನಲ್ಲಿ ಶಾಂತಿ, ನೆಮ್ಮದಿ ಸಾಧ್ಯ ; ಮೂಲೆಗದ್ದೆ ಶ್ರೀಗಳು

0 223

ರಿಪ್ಪನ್‌ಪೇಟೆ : ಧಾರ್ಮಿಕ ಆಚರಣೆಗಳಿಂದ ಮನುಷ್ಯನಲ್ಲಿ ಶಾಂತಿ ನೆಮ್ಮದಿಯನ್ನು ನೀಡುತ್ತವೆಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.

ಕಾರಗೋಡು ಗ್ರಾಮದಲ್ಲಿ ಕಲಾನಾಥೇಶ್ವರ ಮತ್ತು ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮದ ಧರ್ಮ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜೀವನದಲ್ಲಿ ಸಾಧನೆಯ ಗುರಿ ತಲುಪಲು ಗುರುವಿನ ಕಾರುಣ್ಯ ಅಗತ್ಯ. ಮಹಾ ಶಿವರಾತ್ರಿಯ ದಿನದೊಂದು ಭವವಂತನ ನಾಮಸ್ಮರಣೆ ಪುಣ್ಯದ ಕೆಲಸವನ್ನು ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುವುದೆಂದು ಹೇಳಿದರು.

ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ನೇತೃತ್ವ ವಹಿಸಿ ಆಶಿರ್ವಚನ ನೀಡಿ, ಸಮಾಜದ ಸಂಘಟನೆಗೆ ಗ್ರಾಮದಲ್ಲಿ ದೇವಸ್ಥಾನ ಶಾಲೆಗಳು ನಿರ್ಮಾಣವಾಗಬೇಕು. ಧರ್ಮದ ಕಾರ್ಯಗಳೊಂದಿಗೆ ದೇಶ ಕಾಯುವ ಯೋಧರ ಮತ್ತು ವ್ಯಾಸಂಗ ಮಾಡುವ ಮಕ್ಕಳ ಶ್ರಯೋಭಿವೃದ್ದಿಗೆ ಹೆಚ್ಚು ಆಧ್ಯತೆ ನೀಡಿ ಎಂದ ಅವರು, ಜಗತ್ತಿನಲ್ಲಿ ಒಳ್ಳೆಯ ಕಾರ್ಯಕ್ಕೆ ಗುರುವಿಗೆ ಶ್ರೇಷ್ಟ ಸ್ಥಾನ ನೀಡಲಾಗಿದೆ. ಬ್ರಹ್ಮ-ವಿಷ್ಣು-ಮಹೇಶ್ವರ ಮೂರು ಶಕ್ತಿಯನ್ನು  ಒಂದೇ ರೂಪದಲ್ಲಿ ಶಿವನ ಸ್ಮರಣೆಯಲ್ಲಿ ಕಾಣುವಂತಾಗಿದೆ ಎಂದ ಅವರು, ಅನ್ನ ಕೊಡುವ ರೈತರ ಬದುಕು ಹಸನನಾಗಲು ಕಾಲಕಾಲಕ್ಕೆ ಮಳೆಯಾಗಿ ಸಂವೃದ್ಧಿಯನ್ನು ಕರುಣಿಸುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಗಿದೆ ಎಂದರು.

ಕಲಾನಾಥೇಶ್ವರ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಯೋಗೇಂದ್ರ ಕಾರಗೋಡು ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ, ಕಲಾನಾಥೇಶ್ವರ ದೇವಸ್ಥಾನ ಸೇವಾಸಮಿತಿಯ ಗೌರವಾಧ್ಯಕ್ಷ ಹೂವಪ್ಪ ಕಾರಗೋಡು, ದೇವಸ್ಥಾನ ವಾಸ್ತು ಸಲಹೆಗಾರ ಲಿಂಗಸ್ವಾಮಿಗೌಡರು ಆಲವಳ್ಳಿ, ಮಳಲಿಮಠದ ವೇ.ಶಿವರಾಜ ಆರಾಧ್ಯ ಶಾಸ್ತ್ರಿಗಳು ಮುಖ್ಯ ಆತಿಥಿಗಳಾಗಿ ಭಾಗವಹಿಸಿದರು.

ವೈಧಿಕತ್ವದ ಸಾರತ್ಯದಲ್ಲಿ ವೇ. ಶಿವರಾಜ ಆರಾಧ್ಯ ಶಾಸ್ತ್ರಿಗಳು ಮಳಲಿಮಠದ ಇವರಿಂದ ಶ್ರೀ ಕಲಾನಾಥೇಶ್ವರ ಸ್ವಾಮಿಯ ಹಾಗೂ ಪರಿವಾರ ಪುನರ್ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಹರೀಶ್ ಸ್ವಾಗತಿಸಿದರು. ಚೇತನಕುಮಾರ್ ನಿರೂಪಿಸಿದರು.

Leave A Reply

Your email address will not be published.

error: Content is protected !!