ಶಿವಮೊಗ್ಗ: ಬಿಜೆಪಿ ಅಧಿಕಾರ ದುರುಪಯೋಗ ಮಾಡಿದೆ. ನಮ್ಮ ಶಾಸಕರ ಮೇಲೆ ಕೇಸು ಹಾಕಿಸಿದೆ ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬಡಿ ಪಂದ್ಯಾವಳಿಯಲ್ಲಿ ಮ್ಯಾಟ್ ಸುಟ್ಟು ಹಾಕಲು ಯತ್ನಿಸಿದರು. ಅದಕ್ಕೆ ಬೇರೆ ಬಣ್ಣ ಕಟ್ಟಿ ಸಮಸ್ಯೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.
ನಮ್ಮ ಮುಖಂಡರ ಮೇಲೂ ದೂರು ದಾಖಲಿಸಿದ್ದಾರೆ. ನಾವು ಕೂಡ ಹಿಂದುಗಳೇ, ರಾಮನ ಭಕ್ತರೆ. ಶಿವಕುಮಾರ ಅಂದರೆ ಶಿವನ ಪುತ್ರ ಎಂದರ್ಥ. ಸಿದ್ದರಾಮಯ್ಯ ಹೆಸರಲ್ಲೂ ರಾಮನ ಹೆಸರಿದೆ. ನಾವೆಲ್ಲಾ ರಾಮನ ಮಕ್ಕಳೇ. ರಾಮ ಕೇವಲ ಅವರಿಗೆ ಮಾತ್ರನಾ ಎಂದು ಪ್ರಶ್ನಿಸಿದರು.
ರಾಜ್ಯದೆಲ್ಲೆಡೆ ಕಾರ್ಯಕರ್ತರ ಮೇಲೆ ಕಿರುಕುಳ ನೀಡಲು ಬಿಜೆಪಿ ಯತ್ನಿಸಿದೆ. ನೂರು ಸುಳ್ಳು ಹೇಳಬೇಕು ಅಂತಾ ಸಚಿವ ಈಶ್ವರಪ್ಪ ಹೇಳಿದ್ದರು. ಅದೇ ರೀತಿ ಸುಳ್ಳು ಕೇಸು ಹಾಕಲಾಗುತ್ತಿದೆ ಎಂದು ದೂರಿದರು.
Related