HOSANAGARA | ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ, ಹೊಸನಗರ ತಾಲೂಕಿನ ಮೂಲೆಗದ್ದೆ ಮಠದ ಬಳಿ ರಸ್ತೆಗೆ ಬೃಹತ್ ಮರ ಅಡ್ಡಲಾಗಿ ಬಿದ್ದ ಪರಿಣಾಮ ಸಾಗರ, ಮಾಸ್ತಿಕಟ್ಟೆ, ಕುಂದಾಪುರ ರಸ್ತೆ ಸಂಚಾರ ಕೆಲಕಾಲ ಸ್ಥಗಿತಗೊಂಡಿತು.

ರಾಷ್ಟ್ರೀಯ ಹೆದ್ದಾರಿ 766ಸಿಯಲ್ಲಿ ಈ ಘಟನೆ ನಡೆದಿದ್ದು ಮಂಗಳೂರು, ಉಡುಪಿ, ಕುಂದಾಪುರ ತೆರಳಲು ವಾಹನ ಸವಾರರು ಪರದಾಡಬೇಕಾಯಿತು.

ಗಂಟೆಗಟ್ಟಲೇ ವಾಹನಗಳು ನಿಂತಲೇ ನಿಂತಿದ್ದವು, ಅರಣ್ಯಾಧಿಕಾರಿಗಳು ಮರ ತೆರವು ಕಾರ್ಯಾಚರಣೆ ನಡೆಸಿದರು.
ಬೆಳಗಿನಜಾವ ನಾಲ್ಕು ಗಂಟೆಯಿಂದ ವಾಹನಗಳು ನಿಂತಲೇ ನಿಂತಿದ್ದವು, ರಸ್ತೆ ಸಂಚಾರ ಸ್ಥಗಿತ ಹಿನ್ನಲೆಯಲ್ಲಿ ಬದಲಿ ರಸ್ತೆ ಹುಡುಕಿ ವಾಹನಗಳು ಚಲಾಯಿಲಿದ ಘಟನೆ ನಡೆದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.