ಏ. 24 ರಂದು ಗುಳಿಗುಳಿ ಶ್ರೀ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ

0 215

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಅಂದಾಲ್ಸ್ ರಾಘುಭಟ್ ನೇತೃತ್ವದಲ್ಲಿ ಹಾರೋಹಿತ್ತಲು ನಾಗಭೂಷಣ ಭಟ್ ಮತ್ತು ಶಿರಸಿಯ ಶ್ರೀಕಾಂತ ಭಟ್ ಇವರ ಪುರೋಹಿತ್ವದಲ್ಲಿ 9ನೇ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಕುಂಭಾಭಿಷೇಕ ಹಾಗೂ ಕಲಾ ಹೋಮ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಧಾರ್ಮಿಕ ಧರ್ಮಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಶ್ರೀಶಂಕರೇಶ್ವರ ದೇವಸ್ಥಾನ ಸೇವಾ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಂತರ 12 ಗಂಟೆಗೆ ಧರ್ಮಸಮಾರಂಭ ಏರ್ಪಡಿಸಲಾಗಿದ್ದು ಈ ಸಮಾರಂಭದ ದಿವ್ಯಸಾನಿಧ್ಯವನ್ನು ಮೂಲೆಗದ್ದ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮಿಜಿ ವಹಿಸಿ ಆಶೀರ್ವಚನ ನೀಡುವರು.

ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಶಂಕರೇಶ್ವರ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ವಾಸುದೇವ ಶೇಟ್ ವಹಿಸುವರು ಈ ಧಾರ್ಮಿಕ ಧರ್ಮಸಭೆಯ ನಂತರ ಶ್ರೀಶಂಕರೇಶ್ವರ ಸ್ವಾಮಿಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಹಾಗೂ ಸಾಮೂಹಿಕ ಅನ್ನಸಂತರ್ಪಣೆ ಜರುಗಲಿದೆ ಎಂದು ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!