ಮೋದಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಬಂಧನ !

0 332

ಚಿಕ್ಕಮಗಳೂರು: ನಗರದ ಆದ್ರಿಕಾ ಹೋಟೆಲ್‌ನಲ್ಲಿ ಉಡುಪಿ – ಚಿಕ್ಕಮಗಳೂರು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಸಚಿವ ಶಿವರಾಜ್‌ ತಂಗಡಿ ವಿರುದ್ದ ಘೋಷಣೆ ಕೋಗಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿರವರು ಮೋದಿ ಹೆಸರು ಹೇಳಿದವರಿಗೆ ಕಪಾಳಕ್ಕೆ ಹೊಡೆಯಿರಿ ಎಂಬ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹೋಟೆಲ್ ಹೊರಗೆ ಪ್ರತಿಭಟಿಸಿದರು. ಜಯಪ್ರಕಾಶ್ ಹೆಗ್ಡೆ, ಸಚಿವ ಕೆ.ಜೆ ಜಾರ್ಜ್ ಹೋಟೆಲ್ ಹೊರಗೆ ಆಗಮಿಸುತ್ತಿದ್ದಂತೆ ಮೋದಿ ಮೋದಿ ಎಂದು ಘೋಷಣೆ ಕೂಗಿದರು. ಮೋದಿ ಪೋಸ್ಟರ್ ಹಿಡಿದು ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

‘ಕಾಂಗ್ರೆಸ್ ಸಚಿವರಿಗೆ ಬಿಸಿ ಮುಟ್ಟಿಸಲು ಬಂದ ಹಿಂದೂ ಕಾರ್ಯಕರ್ತರು ನಾವು, ಏಕೆ ಬಂಧನ ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿದರು.

ಲೋಕಸಭಾ ಚುನಾವಣೆ ನೀತಿ ಸಂಹಿತಿ ಜಾರಿಯಲ್ಲಿ ಇದ್ದರೂ ಪ್ರತಿಭಟನೆ ನಡೆಸಿದ ಕಾರಣಕ್ಕೆ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ಸಹಾ ನಡೆಯಿತು. ಗಲಾಟೆ ಮಾಡಲು ಬಂದಿಲ್ಲ ಪ್ರತಿಭಟಿಸುತ್ತಿದ್ದೇವೆ ಅಷ್ಟೇ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನೆಲೆ ಕೆ.ಜೆ ಜಾರ್ಜ್, ಜಯಪ್ರಕಾಶ್ ಹೆಗ್ಡೆ, ಸೇರಿದಂತೆ ಜಿಲ್ಲೆಯ ಐವರು ಶಾಸಕರು ಹೋಟೆಲ್ ಹೊರಗೆ ಕೆಲಕಾಲ ಬರಲಿಲ್ಲ.

Leave A Reply

Your email address will not be published.

error: Content is protected !!