Shivamogga | ಸೆಕ್ಷನ್ 144 ಮಾರ್ಪಾಡು ಆದೇಶ

0 168

ಶಿವಮೊಗ್ಗ : ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ ಹಿನ್ನೆಲೆ ಪರಿಸ್ಥಿತಿ ಸೂಕ್ಷ್ಮತೆಯಿಂದ ಕೂಡಿದ ಕಾರಣ ಮಹಾನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿರುವುದರಿಂದ ರಾಗಿಗುಡ್ಡ-ಶಾಂತಿನಗರ ವ್ಯಾಪ್ತಿಯನ್ನು ಹೊರತುಪಡಿಸಿ ಶಿವಮೊಗ್ಗ ಮಹಾನಗರಪಾಲಿಕೆಯ ಇತರೆ ಪ್ರದೇಶದಲ್ಲಿ ಕಲಂ 144 ಆದೇಶವನ್ನು ತೆರವುಗೊಳಿಸಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

ಹಾಗೂ ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ದಿ: 08-10-2023 ರಿಂದ ಮುಂದಿನ ಆದೇಶದವರೆಗೆ ನಿಬಂಧನೆಗಳನ್ನು ವಿಧಿಸಿ ಕಲಂ 144 ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿರುತ್ತಾರೆ.

Leave A Reply

Your email address will not be published.

error: Content is protected !!