ಮೂಡಿಗೆರೆ: ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ತಾಯಿ ಮತ್ತು ಮಗ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ.
ಪೂಜಾ ಹಿರೇಮಠ್, ರಾಜಶೇಖರ ಹಿರೇಮಠ್ ಮೃತ ದುರ್ದೈವಿಗಳಾಗಿದ್ದು ಗಾಯಗೊಂಡ ಶಿವಯಾಗಯ್ಯ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದು, ಸಕಲೇಶಪುರದಿಂದ ಮೂಡಿಗೆರೆ ಕಡೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.