ಆ. 28ಕ್ಕೆ ಕಟ್ಟಡ ಕಾರ್ಮಿಕರ ಸಂಘ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯ ಉದ್ಘಾಟನೆ
ರಿಪ್ಪನ್ಪೇಟೆ : ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆಯನ್ನು ಸಂಸದ ಬಿ ವೈ ರಾಘವೇಂದ್ರ ನೆರವೇರಿಸಲಿದ್ದಾರೆ ಎಂದು ಕಟ್ಟಡ ಕಾರ್ಮಿಕರ ಸಂಘದ ಹೊಸನಗರ ತಾಲೂಕಿನ ಗ್ರಾಮಾಂತರ ವಿಭಾಗದ ಅಧ್ಯಕ್ಷ ಮಹಮ್ಮದ್ ಹುಸೇನ್ ಬುಧವಾರ ಸಂಜೆ ಪಟ್ಟಣದ ಗ್ರಾಮ ಪಂಚಾಯತಿಯಲ್ಲಿನ ಕುವೆಂಪು ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಗಸ್ಟ್ 28ರ ಸೋಮವಾರ ಜಿಎಸ್ಬಿ ಕಲ್ಯಾಣ ಮಂದಿರದಲ್ಲಿ ಬೆಳಿಗ್ಗೆ 9:00 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಹೆಚ್ ಹಾಲಪ್ಪ ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಸುಬ್ರಮಣಿ, ಗ್ರಾಮಾಂತರ ಅಧ್ಯಕ್ಷ ಸಂಜಯ್ ಕುಮಾರ್, ಕಾರ್ಮಿಕ ಅಧಿಕಾರಿ ಸುಮಾ ಇನ್ನು ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ಸತೀಶ್ ಆರ್, ಕಾರ್ಯದರ್ಶಿ ಪರಮೇಶ್, ಖಜಾಂಚಿ ರಾಘವೇಂದ್ರ, ಶೌಕತ್, ವೆಂಕಟೇಶ್, ಜಿಲ್ಲಾ ಸಂಘದ ಸುಂದರ್ ಬಾಬು, ಕೆ ಎಸ್ ವಿಜಯ್ ಕುಮಾರ್, ಇನ್ನಿತರರು ಉಪಸ್ಥಿತರಿದ್ದರು.