ಮಂಗನ ಕಾಯಿಲೆಗೆ ಮಲೆನಾಡಿನಲ್ಲಿ ಮತ್ತೊಂದು ಬಲಿ !

0 447

ಕೊಪ್ಪ : ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದ್ದು, ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ.

ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಸಾವನ್ನಪ್ಪಿದವರಾಗಿದ್ದಾರೆ. ರತ್ನ ತೀವ್ರ ಜ್ವರದಿಂದ ಬಳಲುತ್ತಿದ್ದು, ಜ್ವರ ಉಲ್ಬಣಗೊಂಡು ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢವಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದ್ದು, ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಭೀತಿ ಹೆಚ್ಚುತ್ತಿದೆ.

ಕೊಪ್ಪ, ಎನ್.ಆರ್. ಪುರ, ಶೃಂಗೇರಿ ತಾಲೂಕಿನಲ್ಲಿ ಸೋಂಕು ಹೆಚ್ಚುತ್ತಿದೆ. 11 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave A Reply

Your email address will not be published.

error: Content is protected !!