Sringeri | ಶಾರದಾಂಬೆ ದರ್ಶನ ಪಡೆದ RSS ಮುಖ್ಯಸ್ಥ ಮೋಹನ್ ಭಾಗವತ್
ಶೃಂಗೇರಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ್ ಮೋಹನ್ ಭಾಗವತ್ ಅವರು ಶೃಂಗೇರಿ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಶ್ರೀಗಳ ಆಶೀರ್ವಾದ ಪಡೆದರು.
ಗುರುವಾರ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್ ಶಾರದ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಹಿರಿಯ ಶ್ರೀಗಳಾದ ಭಾರತೀತೀರ್ಥ ಶ್ರೀಗಳು ಹಾಗೂ ಹಿರಿಯ ಶ್ರೀ ವಿಧುಶೇಖರ ಸ್ವಾಮೀಜಿಯನ್ನು ಭೇಟಿ ಮಾಡಿ ಒಂದೂವರೆ ಗಂಟೆಗಳ ಕಾಲ ಚರ್ಚಿಸಿದರು.
ಭಾಗವತ್ ಅವರ ಜತೆ ಐವರು ಸದಸ್ಯರು ಭಾಗಿಯಾಗಿದ್ದು, ರಾಮ ಮಂದಿರ ಉದ್ಘಾಟನೆಗೆ ಶ್ರೀಗಳನ್ನು ಆಹ್ವಾನ ನೀಡಲು ಬಂದಿರಬಹುದೆಂದು ಹೇಳಲಾಗುತ್ತಿದೆ.