ವಾಣಿಜ್ಯ ತೆರಿಗೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ, ಕಂತೆ ಕಂತೆ ಹಣ ಪತ್ತೆ

0 601

ತರೀಕೆರೆ : ಇಲ್ಲಿನ ವಾಣಿಜ್ಯ ತೆರಿಗೆ ಅಧಿಕಾರಿ ಕೆ.ಆರ್. ನೇತ್ರಾವತಿ ಎಂಬುವರ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ ನಡೆದಿದ್ದು, 5 ಲಕ್ಷ ರೂ. ನಗದು, 900 ಗ್ರಾಂ ಚಿನ್ನ ಮತ್ತು ಬೆಳ್ಳಿ ಆಭರಣಗಳು ದೊರೆತಿವೆ.

ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿರುವ ಮಾಹಿತಿ ಮೇರೆಗೆ ಪಟ್ಟಣದ ಪ್ಲಾಂಟರ್ಸ್‌ ಪಾರ್ಕ್‌ ಲೇಔಟ್‌ನಲ್ಲಿರುವ ಅವರ ಮನೆ ಮತ್ತು ಟಿ.ಬಿ.ಕಾಂತರಾಜು ರಸ್ತೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆದಿದ್ದು ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!