ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

0 558

ರಿಪ್ಪನ್‌ಪೇಟೆ : ಇದೇ ಜ. 5 ರಂದು ಬಟ್ಟೆಮಲ್ಲಪ್ಪದ ಶ್ರೀವ್ಯಾಸ ಮಹರ್ಷಿ ಗುರುಕುಲ ವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿರುವ ಹೊಸನಗರ ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ  ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತ ಹ.ಅ.ಪಾಟೀಲ್ ಅವರ ನಿವಾಸಕ್ಕೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ನೇತೃತ್ವದಲ್ಲಿ ಭೇಟಿ ನೀಡಿ ಆಹ್ವಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ  ಪರಿಷತ್ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಕಾಮತ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ‌.ಮ. ನರಸಿಂಹ, ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗಭೂಷಣ್, ಹೋಬಳಿ ಘಟಕದ ಸಂಘಟನಾ ಕಾರ್ಯದರ್ಶಿ ಹಸನಬ್ಬ ಬಿ.ಕೆ.ರಾಘವೇಂದ್ರ, ರವಿ, ಆರ್.ಹೆಚ್.ದೇವದಾಸ್ ಇನ್ನಿತರರು ಹಾಜರಿದ್ದರು.

Leave A Reply

Your email address will not be published.

error: Content is protected !!