ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಅದಿರು ತುಂಬಿದ ಲಾರಿ !

0 48


ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಡಿಹಳ್ಳ ಗ್ರಾಮದಲ್ಲಿ ಶನಿವಾರ ತಡರಾತ್ರಿ ಲಾರಿಯೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದ್ದು ಚಾಲಕ ಸಣ್ಣ-ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾನೆ.


ಮಂಗಳೂರಿನಿಂದ ದಾವಣಗೆರೆಗೆ ಹೊರಟಿದ್ದ ಕಬ್ಬಿಣದ ಅದಿರು ತುಂಬಿದ ಲಾರಿ ದಾವಣಗೆರೆಗೆ ಹೋಗುವ ಮಾರ್ಗದ ಹೊಸನಗರ – ರಿಪ್ಪನ್‌ಪೇಟೆ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು. ಲಾರಿಯ ಚಾಲಕ ನಿದ್ದೆಯ ಮಂಪರಿನಲ್ಲಿದ್ದಾಗ ಈ ಅಪಘಾತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave A Reply

Your email address will not be published.

error: Content is protected !!