ಕಾರು ಅಪಘಾತ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

0 498

ಕಾರು ಅಪಘಾತ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು : ತಾಲೂಕಿನ ಕೈ ಮರ ಸಮೀಪದ ದಾಸರಹಳ್ಳಿ ಗ್ರಾಮದಲ್ಲಿ ಪ್ರವಾಸಿಗರ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಲಿಂಗದಹಳ್ಳಿ ಕಡೆಯಿಂದ ಚಿಕ್ಕಮಗಳೂರಿಗೆ ಹೊರಟ್ಟಿದ ಕಾರು ದಾಸರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಆ ನಂತರ ಮಗುಚಿ ರಸ್ತೆ ಬದಿ ಪಲ್ಟಿಯಾಗಿದ್ದು ಕಾರಿನ ಗಾಜುಗಳು ಪುಡಿ ಪುಡಿಯಾಗಿ ಕಾರು ಜಖಂಗೊಂಡಿದೆ.

ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರೀಗೆ ಯಾವುದೇ ರೀತಿ ಅಪಾಯವಾಗಿಲ್ಲ ನಾಲ್ಕು ಜನರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದು ಸಣ್ಣಪುಟ್ಟ ತರಚಿದ ಗಾಯ ಬಿಟ್ಟರೆ ಯಾವುದೇ ರೀತಿಯ ದೊಡ್ಡ ಗಾಯಗಳಾಗಿಲ್ಲದೆ ಎಲ್ಲರು ಪಾರಾಗಿದ್ದಾರೆ.

Leave A Reply

Your email address will not be published.

error: Content is protected !!