ಎರಡು ಕಾರುಗಳ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು !
ಶಿವಮೊಗ್ಗ : ಎರಡು ಕಾರುಗಳ ನಡುವೆ ಭೀಕರ ಅಪಘಾತ (Accident) ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ತಾಲೂಕಿನ ನಿಧಿಗೆ ಗ್ರಾಮದ ಬಳಿ ನಡೆದಿದೆ.
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದು ಕಾರಿನಲ್ಲಿದ್ದ ಶಿವಮೊಗ್ಗ ನಗರದ ಮೇಘರಾಜ್ ಎಂಬುವವರು ಸಾವನ್ನಪ್ಪಿದ್ದಾರೆ.
ಮೇಘರಾಜ್ ಮಾಚೇನಹಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ತೆರಳುವ ವೇಳೆ ಅಪಘಾತವಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.