ಹೆತ್ತ ತಾಯಿಯನ್ನೇ ಬಡಿದು ಕೊಂದ ಪಾಪಿ ಮಗ !!

0 101

ಎನ್.ಆರ್.ಪುರ: ಹೆತ್ತ ತಾಯಿಯನ್ನೇ ಮಗ ಬಡಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲೂಕಿನ ಮುತ್ತಿನಕೊಪ್ಪ ಗ್ರಾಪಂ ವ್ಯಾಪ್ತಿಯ ಆಲ್ದಾರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಆಲ್ದಾರ ಗ್ರಾಮದ ಪಾರ್ವತಮ್ಮ(55) ಮೃತ ಮಹಿಳೆ. ಪಾರ್ವತಮ್ಮ(55), ಪತಿ ಸಿದ್ದಪ್ಪ (60) ಬೆಳಗ್ಗೆ ಬೇಗ ಎದ್ದೇಳಲಿಲ್ಲ ಎಂಬ ಕಾರಣಕ್ಕಾಗಿ ಮಗ ನಾಗರಾಜ್ (26) ಮನೆಯ ಒಲೆಯಲ್ಲಿದ್ದ ಬಡಿಗೆಯನ್ನು ತೆಗೆದುಕೊಂಡು ತಾಯಿ ಹಾಗೂ ತಂದೆಯನ್ನು ಮನ ಬಂದಂತೆ ಥಳಿಸಿದ್ದಾನೆ. ತೀವ್ರ ಗಾಯಗೊಂಡಿದ್ದ ಪಾರ್ವತಮ್ಮ ಅವರನ್ನು ಅಕ್ಕಪಕ್ಕದವರು ಶಿವಮೊಗ್ಗದ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪಾರ್ವತಮ್ಮ ಮೃತಪಟ್ಟಿದ್ದಾರೆ.

ಸಿದ್ಧಪ್ಪನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ನಾಗರಾಜ ಮನೆಯಲ್ಲಿ ಸಣ್ಣ-ಪುಟ್ಟ ವಿಚಾರಕ್ಕೂ ಜಗಳ ತೆಗೆಯುತ್ತಿದ್ದ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Leave A Reply

Your email address will not be published.

error: Content is protected !!