Hosanagara | ಶ್ರೀ ಧರ್ಮಸ್ಥಳ ಸಂಘದ ಆಶ್ರಯದಲ್ಲಿ ಪಾನಮುಕ್ತರ ಬೃಹತ್ ಜನಜಾಗೃತಿ ಜಾಥಾ – ನವ ಜೀವನ ಸಮಿತಿ ಸದಸ್ಯರಿಗೆ ಪುರಸ್ಕಾರ ಅಭಿನಂದನೆ

0 693

ಹೊಸನಗರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಜಿಲ್ಲಾ ಜನಜಾಗೃತಿ ವೇದಿಕೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ನವ ಜೀವನ ಸಮಿತಿ ಹೊಸನಗರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ನವ ಜೀವನ ಸಮಿತಿ ಸದಸ್ಯರಿಗೆ ಪುರಸ್ಕಾರ ಬೃಹತ್ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಎಂ.ಎಸ್ ಸಂತೋಷ್ ಹಾಗೂ ಪ್ರಧಾನ ವ್ಯವಹಾರ ನ್ಯಾಯಾಧೀಶ ಕೆ. ರವಿಕುಮಾರ್ ರವರು ಉದ್ಘಾಟಿಸಿ ಚಾಲನೆ ನೀಡಿದರು.

ಡೊಳ್ಳು ಕುಣಿತ, ಕೋಲಾಟ, ಚಂಡೇವಾದನ ವಿವಿಧ ಸಾಂಸ್ಕೃತಿಕ ಪ್ರಕಾರಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದ ಕಾರ್ಯಕರ್ತರು ತಾಲೂಕು ಕಚೇರಿಗೆ ತೆರಳಿ ತಮ್ಮ ಹಕ್ಕೋತಾಯ ಮನವಿ ಸಲ್ಲಿಸಿ ನಂತರ ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ನಾರಾಯಣ ಕಾಮತ್ ರವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಸಲಾಯಿತು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಹ.ರು ಗಂಗಾಧರಯ್ಯ ವಿಶೇಷ ಉಪನ್ಯಾಸ ನೀಡಿ, ಸುಖ ಸಂಸಾರಕ್ಕೆ ಸುಖೀ ಜೀವನಕ್ಕೆ ಪಾನ ಮುಕ್ತರಾಗುವಂತೆ ಕರೆ ನೀಡಿದರು. ಧರ್ಮಸ್ಥಳದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗಡೆ ದಂಪತಿಗಳ ಮಾರ್ಗದರ್ಶನದಲ್ಲಿ ನಡೆಸಲ್ಪಡುತ್ತಿರುವ ಸಮಾಜಮುಖಿ ಕಾರ್ಯ ನಿರಂತರವಾಗಿರುವಂತೆ ಭಗವಂತನಲ್ಲಿ ಪ್ರಾರ್ಥಿಸಿದರು‌

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಚಂದ್ರಶೇಖರ್ ಜೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎನ್.ಆರ್ ದೇವಾನಂದ್, ಕೊಡಚಾದ್ರಿ ಜೆಸಿಐ ಅಧ್ಯಕ್ಷ ವಕೀಲ ಮೋಹನ್ ಜಿ ಶೆಟ್ಟಿ, ಮಹಿಳಾ ಸಿರಿಗನ್ನಡ ವೇದಿಕೆ ಅಧ್ಯಕ್ಷೆ ಶಶಿಕಲಾ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ನಾಗರತ್ನ ದೇವರಾಜ್, ಜಿ ಹೆಚ್ ದೇವೇಂದ್ರ, ನಾಗರಾಜ್ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ರಮ್ಯಾ ಮತ್ತು ನಿಶ್ಮಿತಾ ಪ್ರಾರ್ಥಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಕೆ ಬೇಬಿ ಸ್ವಾಗತ ಕೋರಿದರು. ನಾಗೇಶ್ ಕಾರ್ಯಕ್ರಮ ನಿರೂಪಿಸಿದರು. ಸುಭಾಷ್ ವಂದಿಸಿದರು.

Leave A Reply

Your email address will not be published.

error: Content is protected !!