ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್ ಕೆ.ವೈ. ನಿಧನ !
ರಿಪ್ಪನ್ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ 10:45ರ ಸುಮಾರಿಗೆ ನಿಧನರಾದರು.
ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಸತತ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದ ಇವರು ಅಪಾರ ಸಂಖ್ಯೆಯ ಸ್ನೇಹ ವಲಯವನ್ನು ಹೊಂದಿದ್ದರು.
ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಸಹೋದರರು, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಸಾರ್ವಜನಿಕರ ಅಂತಿಮ ದರ್ಶನಕ್ಕೆ ಕರಿಗೆರಸುವಿನ ಅವರ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮೃತರ ಅಂತ್ಯಕ್ರಿಯೆಯು ಮಂಗಳವಾರ ಸಂಜೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ತಿಳಿದು ಬಂದಿದೆ.
ಸಂತಾಪ :
ಜಯಂತ್ ರವರ ಅಕಾಲಿಕ ನಿಧನಕ್ಕೆ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾಪಂ ಮಾಜಿ ಸದಸ್ಯ ಬಿ.ಜಿ. ಚಂದ್ರಮೌಳಿ, ಕೋಡೂರು ಗ್ರಾಪಂ ಅಧ್ಯಕ್ಷ ಉಮೇಶ್, ಉಪಾಧ್ಯಕ್ಷ ಸುಧಾಕರ್ ಹಾಗೂ ಗ್ರಾಪಂನ ಸರ್ವ ಸದಸ್ಯರು, ಪಿಡಿಒ, ಸಿಬ್ಬಂದಿ ವರ್ಗ ಮತ್ತಿತರರು ತೀವ್ರ ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.