SHIKARIPURA | ಕಾರು-ಖಾಸಗಿ ಬಸ್ ಮುಖಾಮುಖಿ (Accident) ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಶಿಕಾರಿಪುರ ತಾಲ್ಲೂಕು ದೇವಿಕೊಪ್ಪ ಸಮೀಪ ಸಂಭವಿಸಿದೆ.
ಆನವಟ್ಟಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಗೆ ಶಿರಾಳಕೊಪ್ಪದ ಕಡೆದಿಂದ ಹೋಗುತ್ತಿದ್ದ ಕಾರು ಡಿಕ್ಕಿಯಾದ ರಭಸಕ್ಕೆ ಬಸ್ ಪಲ್ಟಿಯಾಗಿ ರಸ್ತೆ ಮೇಲೆಯೇ ಉರುಳಿ ಬಿದ್ದಿದೆ. ಹೀಗೆ ಬಿದ್ದ ಬಸ್ ಕಾರಿನ ಮೇಲೆಯೇ ಬಿದ್ದಿದ್ದರಿಂದ ಸ್ಥಳದಲ್ಲಿಯೇ ಕಾರು ಚಾಲಕ ಬಸವಪ್ಪ ಎಂಬುವವರು ಸಾವನ್ನಪ್ಪಿದ್ದಾರೆ.

ಇನ್ನೂ ಬಸ್ನಲ್ಲಿದ್ದ ಪ್ರಯಾಣಿಕರು ಸಹ ಗಾಯಗೊಂಡಿದ್ದು, ತಕ್ಷಣ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಪ್ರಯಾಣಿಕರನ್ನ ಸುರಕ್ಷಿತವಾಗಿ ಬಸ್ನಿಂದ ಹೊರಕ್ಕೆ ಕರೆತಂದಿದ್ದಾರೆ.

ಬಸ್ನ ಕಿಟಕಿಯ ಗಾಜುಗಳನ್ನು ಒಡೆದು ಅದರಿಂದ ಪ್ರಯಾಣಿಕರನ್ನ ಹೊರಕ್ಕೆ ಕರೆತಂದಿದ್ದಾರೆ.


ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.