ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ; ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರ್ ವಿರುದ್ಧ ದಾಖಲಾಯ್ತು ಕೇಸ್ !

0 5,335

ತೀರ್ಥಹಳ್ಳಿ : ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರ್ ಮೇಲೆ ಕೇಸ್ ದಾಖಲಿಸಲಾಗಿದೆ.

ಏನಿದು ಘಟನೆ ?
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಾಳೂರು ಶಾಣಾ ಎಎಸ್‌ಐ ಕೃಷ್ಣಮೂರ್ತಿ ರವರಿಗೆ ಹೆದ್ದಾರಿ ಗಸ್ತು ಕರ್ತವ್ಯಕ್ಕೆ ನೇಮಕವಾಗಿದ್ದು ಅದರಂತೆ ಎಎಸ್‌ಐ ರವರು ತಮ್ಮ ಸಿಬ್ಬಂದಿಯವರೊಂದಿಗೆ ಹೆದ್ದಾರಿ ಗಸ್ತು ವಾಹನ KA 14G 1531 ರಲ್ಲಿ ಹೆದ್ದಾರಿ ಗಸ್ತು ನಿರ್ವಹಿಸುತ್ತಿದ್ದು ಇತ್ತೀಚೆಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ (VISIBLE OFFENCE ) ವ್ಯಕ್ತಿಗಳನ್ನು ಹಾಗೂ ಮದ್ಯಪಾನ ಮತ್ತಿತರೆ ಕಾನೂನು ಉಲ್ಲಂಘನೆ ಮಾಡಿದವರ ಬಗ್ಗೆ ಬೆಳಿಗ್ಗೆ 10-30ರ ಸಮಯದಲ್ಲಿ ಬಾಳೇಬೈಲಿನಲ್ಲಿ ಚೆಕ್ ಮಾಡುತ್ತಿದ್ದಾಗ ಒಬ್ಬರಿಗೆ ಸೀಟ್ ಬೆಲ್ಟ್ ಹಾಕದೇ ಇರುವ ಬಗ್ಗೆ ಸ್ಥಳ ದಂಡದ ರಶೀದಿಯನ್ನು ಬರೆಯುತ್ತಿರುವಾಗ ಮತ್ತು ವಾಹನಗಳನ್ನು ಚೆಕ್ ಮಾಡುತ್ತಿದ್ದಾಗ ವಿಜಯಟೈಮ್ಸ್ ಚಾನೆಲ್‌ನ ವಿಜಯಲಕ್ಷ್ಮೀ ಶಿಬರೂರ್ ಮತ್ತು ಅವರ ಕಡೆಯ ನಾಲ್ಕೈದು ಜನರು ಗುಂಪು ಗೂಡಿಕೊಂಡು ಬಂದು ಸರ್ಕಾರಿ ಇಲಾಖಾ ವಾಹನಕ್ಕೆ ಅಡ್ಡಲಾಗಿ ನಿಂತು ವಾಹನ ತಪಾಸಣೆ ಮಾಡದಂತೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಸರ್ಕಾರದಿಂದ ನೀಡಿದ ರಶೀದಿ ಪುಸ್ತಕವನ್ನು ಕಸಿದುಕೊಂಡು ಅವರ ವಿಡಿಯೋಗಳನ್ನು ತೆಗೆದುಕೊಂಡು ಎಎಸ್‌ಐ ರವರಿಗೆ ವಾಹನ ತಪಾಸಣೆ ಮಾಡಲು ಬಿಡದೇ ಅಪಘಾತಗಳನ್ನು ತಡೆಯುವ ತಮ್ಮ ಕರ್ತವ್ಯದಿಂದ ಹಿಮ್ಮೆಟ್ಟಿಸುವ ಸಲುವಾಗಿ ಸರ್ಕಾರಿ ಕೆಲಸ ನಿರ್ವಹಿಸದಂತೆ ಅಡ್ಡಿಪಡಿಸಿ ಪೊಲೀಸರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಾ ಸಾರ್ವಜನಿಕರಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ವರ್ತಿಸಿದ ವಿಜಯ ಟೈಮ್ಸ್ ನ್ಯೂಸ್ ಚಾನೆಲ್‌ನ ವಿಜಯಲಕ್ಷ್ಮೀ ಶಿಬರೂರು ಮತ್ತು ಅವರ ಜೊತೆಯಲ್ಲಿದ್ದ ಸಿಬ್ಬಂದಿಯವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave A Reply

Your email address will not be published.

error: Content is protected !!