ಮಾ.03 ರಂದು ಕಾಫಿನಾಡಿಗೆ ಸಿದ್ದರಾಮಯ್ಯ ಭೇಟಿ

0 222

ಚಿಕ್ಕಮಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 03 ರಂದು ಅಪರಾಹ್ನ 01.00 ಗಂಟೆಗೆ ನಗರದ ನೇತಾಜಿ ಸುಭಾಷ್‌ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ರಾಜ್ಯ ವಲಯದಿಂದ ನಿರ್ಮಾಣವಾಗಿರುವ ಬಾಲಕಿಯರ ಕ್ರೀಡಾ ವಸತಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಹಾಗೂ ಕಲ್ಯಾಣ ನಗರ ಕ್ರೀಡಾಂಗಣದ ಸುತ್ತ ಕಾಂಪೌಂಡ್ ಮತ್ತು ಚೈನ್ ಲಿಂಕ್ ಫೆನ್ಸಿಂಗ್ ಕಾಮಗಾರಿಗಳ ಭೂಮಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೌರವ ಘನ ಉಪಸ್ಥಿತರಿರಲಿದ್ದಾರೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ, ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ ಬಿ., ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಡಿ. ರಾಜೇಗೌಡ ಮತ್ತು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ|| ಆರತಿಕೃಷ್ಣ ಘನ ಉಪಸ್ಥಿತರಿರಲಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಡಿ. ತಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಸಭಾ ಸಂಸದರಾದ ಜೈರಾಮ್ ರಮೇಶ್, ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ಶ್ರೀನಿವಾಸ್ ಜಿ.ಹೆಚ್., ಕೆ.ಎಸ್. ಆನಂದ್, ನಯನಾ ಮೋಟಮ್ಮ, ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ, ಹಾಗೂ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Leave A Reply

Your email address will not be published.

error: Content is protected !!