Ripponpet | ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಲಾರಿಯಲ್ಲಿದ್ದ ಮರದ ದಿಮ್ಮಿ ಬಿದ್ದು ವ್ಯಕ್ತಿಯ ಕುತ್ತಿಗೆ ಕಟ್ !

0 9,069

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಿಲ್ಲೇಶ್ವರದಲ್ಲಿ ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಟಿಂಬರ್ ಲಾರಿಯಿಂದ ಮರದ ತುಂಡು ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಹುಂಚ ಗ್ರಾಪಂ ವ್ಯಾಪ್ತಿಯ ಕಡಸೂರು ಗ್ರಾಮದ ನವೀನ್ (32) ಗಂಭೀರ ಗಾಯಗೊಂಡ ವ್ಯಕ್ತಿ. ಬಿಲ್ಲೇಶ್ವರ ಗ್ರಾಮದ ಮುಖ್ಯ ರಸ್ತೆಯಲ್ಲಿ ಬೈಕಿನಲ್ಲಿ ತೆರಳುತಿದ್ದ ನವೀನ್ ತಲೆ ಮೇಲೆ ಟಿಂಬರ್ ಲಾರಿಯಲ್ಲಿದ್ದ ಮರದ ದಿಮ್ಮಿ ಕುತ್ತಿಗೆ ಮೇಲೆ ಬಿದ್ದ ಪರಿಣಾಮ ಗಾಯಾಳುವಿನ ಕುತ್ತಿಗೆಯ ಭಾಗ ತುಂಡಾಗಿ ತೀವ್ರ ರಕ್ತ ಸ್ರಾವವಾಗಿದೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ.

ವಿಷಯ ತಿಳಿಯುತ್ತಿದ್ದಂತೆ 108 ಸಿಬ್ಬಂದಿಗಳಾದ ಯಲ್ಲಪ್ಪ ಹಾಗೂ ಮಂಜುನಾಥ್ ಸ್ಥಳಕ್ಕೆ ಧಾವಿಸಿ ಗಾಯಾಳುವಿಗೆ ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ದಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!