ತೋಟಕ್ಕೆ ಔಷಧಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು !

0 990

ಹೊಸನಗರ : ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡೇನಕೊಪ್ಪ ಗ್ರಾಮದ ಗಣೇಶ್ ಪೂಜಾರಿ (50) ಎಂಬುವವರು ಅನಾನಸ್ ಬೆಳೆಗೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದಾಗ ತಲೆ ಸುತ್ತು ಬಂದು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ.

ರೈತ ಗಣೇಶ್ ಪೂಜಾರಿ ಔಷಧಿ ಸಿಂಪಡಣೆ ಮಾಡುವಾಗ ಅಸ್ವಸ್ಥಗೊಂಡಿದ್ದು ತಕ್ಷಣವೇ ಅವರನ್ನು ಕುಟುಂಬದವರು ಹೊಸನಗರ ಆಸ್ಪತ್ರೆಗೆ ಕರೆದೊಯ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ರಕ್ತ ವಾಂತಿ ಜಾಸ್ತಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Leave A Reply

Your email address will not be published.

error: Content is protected !!