Rain | ಕಾಫಿನಾಡಿನ ಹಲವೆಡೆ ಧಾರಾಕಾರವಾಗಿ ಸುರಿದ ಮಳೆ
ಚಿಕ್ಕಮಗಳೂರು : ಮಲೆನಾಡಿನ ಭಾಗದಲ್ಲಿ ಶನಿವಾರ ಒಂದು ಗಂಟೆಗೂ ಹೆಚ್ಚು ಕಾಲ ನಿರಂತರ ಮಳೆ ಸುರಿದಿದೆ.
ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ, ಬಸರೀಕಟ್ಟೆ, ಸೀಗೋಡು, ಹೇರೂರು ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ಕಳಸ, ಬಾಳೆಹೊನ್ನೂರು ವ್ಯಾಪ್ತಿಯಲ್ಲೂ ಭಾರಿ ಮಳೆಯಾಗಿದೆ.
ಕಾಫಿ ಹೂ ಬಿಡುವ ಸಮಯಕ್ಕೆ ಸುರಿದ ಮಳೆಯಿಂದಾಗಿ ಮಲೆನಾಡಿನ ಕೃಷಿಕರಲ್ಲಿ ಸಂತಸ ಹೆಚ್ಚಾಗಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದು ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.