ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜೀ ಬಿಜೆಪಿಯ ಹಿಂದುತ್ವ ತುಂಬಿದೆ ; ಕೆ.ಎಸ್.ಈಶ್ವರಪ್ಪ
ರಿಪ್ಪನ್ಪೇಟೆ: ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜೀ ಬಿಜೆಪಿಯ ಹಿಂದುತ್ವವೇ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಇಂದು ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರದ ಕುರಿತು ಕಾರ್ಯಕರ್ತ ಅಭಿಮಾನಿಗಳನ್ನು ಭೇಟಿ ಮಾಡಲು ರಿಪ್ಪನಪೇಟೆಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ನನಗಿಂತ ನಿಷ್ಟಾವಂತರು ಯಾರು ಇದ್ದಾರೆ ? ಎಂದು ಪ್ರಶ್ನಿಸಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಕ್ಕಾಗಿ ಪಕ್ಷ ತೊರೆದು ಹೋದ ವ್ಯಕ್ತಿ. ಆದರೆ ನನಗೆ ಪಕ್ಷ ಹೆತ್ತ ತಾಯಿಯಿದ್ದಂತೆ ಎಂದರು.
ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ👇 https://www.facebook.com/share/v/ebJUGsG7MHcSZ4i3/?mibextid=w8EBqM
ನಾನು ಪಕ್ಷವನ್ನು ತೊರೆಯುವುದಿಲ್ಲ ಎಂದು ಹೇಳಿ ಆಯನೂರು ಮಂಜುನಾಥ್ ಮತ್ತು ಆರ್.ಕೆ.ಸಿದ್ರಾಮಣ್ಣನವರ ಚಿಲ್ಲರೆ ಪ್ರಶ್ನೆಗಳಿಗೆ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ನಾನು ಪಕ್ಷದಲ್ಲಿ ಹಿರಿಯ ರಾಜಕಾರಣಿಯಾಗಿದ್ದು ಕೆಳಹಂತದ ಎಲ್ಲ ಕಾರ್ಯಕರ್ತರ ಸಂಪರ್ಕವೂ ನನಗಿದೆ. ಈಗಾಗಲೇ ಆಂತರಿಕವಾಗಿ ನನಗೆ ಬೆಂಬಲಿಸುತ್ತಿದ್ದು ಚುನಾವಣಾ ಪ್ರಕ್ರಿಯೆ ನಂತರದಲ್ಲಿ ಬಹಿರಂಗವಾಗಿ ಬಿಜೆಪಿಯಿಂದ ಬಂಡೆದ್ದು ನನ್ನೊಂದಿಗೆ ಸೇರ್ಪಡೆಗೊಳ್ಳಲಿದ್ದಾರೆಂದರು.
ಶೀಘ್ರದಲ್ಲಿಯೇ ಕಾರ್ಯಕರ್ತರ ನೇರ ಸಂಪರ್ಕಕ್ಕೆ ಅನುಕೂಲವಾಗುವಂತೆ ಚುನಾವಣಾ ಪ್ರಚಾರ ಕಛೇರಿಯನ್ನು ರಿಪ್ಪನ್ಪೇಟೆಯಲ್ಲಿ ಪ್ರಾರಂಭಿಸಲಾಗುವುದೆಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಜಿಲ್ಲಾ ಮುಖಂಡರಾದ ಆರ್.ಟಿ.ಗೋಪಾಲ್, ತ.ಮ.ನರಸಿಂಹ, ತರಕಾರಿ ಯೋಗೇಂದ್ರಗೌಡ, ಎಲ್.ನಿರೂಪ್ ಕುಮಾರ್ ಪವನ್ಶೆಟ್ಟಿ, ಕೆ.ಗಣೇಶ್ ಪ್ರಸಾದ್ ಇನ್ನಿತರರು, ಪಕ್ಷದ ಮುಖಂಡರು ಇದ್ದರು.