ಶಾಸಕ ಬೇಳೂರು ಗೋಪಾಲಕೃಷ್ಣ ಫೋಟೋ ಇದ್ದ ಫ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು
ರಿಪ್ಪನ್ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಬಳಿ ಜಾತ್ರಾ ಮಹೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಫೋಟೋ ಇದ್ದ ಫ್ಲೆಕ್ಸ್ ಅನ್ನು ಹರಿದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ಸ್ಥಳೀಯ ಗ್ರಾಮಾಡಳಿತದ ಅನುಮತಿ ಪಡೆದು ಫ್ಲೆಕ್ಸ್ ಶುಕ್ರವಾರ ಅಳವಡಿಸಲಾಗಿತ್ತು ಆದರೆ ರಾತ್ರೋರಾತ್ರಿ ಯಾರೋ ಕಿಡಿಗೇಡಿಗಳು ಬ್ಲೇಡ್ ನಲ್ಲಿ ಹರಿದು ವಿಕೃತಿ ಮೆರೆದಿದ್ದಾರೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವ ಮೂಲಕ ಕಿಡಿಗೇಡಿಗಳನ್ನು ಬಂಧಿಸಬೇಕು ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಲಿದ್ದೇವೆ ಎಂದು ಸ್ಥಳೀಯ ಮುಖಂಡ ಪ್ರದೀಪ್ ಹೇಳಿದ್ದಾರೆ.
ಸ್ಥಳಕ್ಕೆ ಪಿಎಸ್ಐ ಪ್ರವೀಣ್ ಭೇಟಿ ನೀಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.