ಚಲಿಸುತ್ತಿದ್ದ ಬೈಕಿಗೆ ನಾಯಿ ಅಡ್ಡ ಬಂದು ಸವಾರ ಸ್ಥಳದಲ್ಲೇ ಸಾವು !

0 1,023

ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕಿಗೆ (Bike) ನಾಯಿ (Dog) ಅಡ್ಡ ಬಂದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ (Death) ಘಟನೆ ತೀರ್ಥಹಳ್ಳಿ (Thirthahalli) ತಾಲೂಕಿನ ಕಲ್ಮನೆ ಸಮೀಪದ ಹೆಗ್ಗೋಡಿನಲ್ಲಿ ನಡೆದಿದೆ.

ಮೃತ ಸವಾರನನ್ನು ಕಮ್ಮರಡಿ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಡುಕಟ್ಟೆಬೈಲು ಹಮೀದ್ ಸಾಬ್ (55) ಎಂದು ಗುರುತಿಸಲಾಗಿದೆ. ಹಮೀದ್ ಸಾಬ್ ಪತ್ನಿ ಜೊತೆ ಬೈಕಿನಲ್ಲಿ ಹೋಗುವಾಗ ನಾಯಿ ಅಡ್ಡ ಬಂದು ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇವರಿಗೆ ಈ ಮೊದಲು ಹೃದಯ ಶಸ್ತ್ರ ಚಿಕಿತ್ಸೆಯಾಗಿತ್ತು. ಎದೆಗೆ ತೀವ್ರವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಮೀದ್ ಅವರ ಪತ್ನಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Leave A Reply

Your email address will not be published.

error: Content is protected !!