ಇಂಧನ ಸಚಿವ ಕೆ.ಜೆ. ಜಾರ್ಜ್ ಕಚೇರಿಯಲ್ಲಿ ಕಳ್ಳತನ !
ಚಿಕ್ಕಮಗಳೂರು : ಚಿಕ್ಕಮಗಳೂರು (Chikkamagaluru) ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕಳ್ಳತನವಾದ (Theft) ಘಟನೆ ನಡೆದಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್ (K.J George) ಕಚೇರಿಯಲ್ಲಿ ಸಚಿವರ ಖಾಸಗಿ ಆಪ್ತ ಸಹಾಯಕನ ಬ್ಯಾಗ್ ಕಳ್ಳತನವಾಗಿದ್ದು, ಫೈಲ್, ಖಾಸಗಿ ಡಾಕ್ಯುಮೆಂಟ್, 15 ಸಾವಿರ ಹಣ ಕಳ್ಳತನವಾಗಿದೆ ಎಂದು ತಿಳಿದು ಬಂದಿದೆ.
ಆಪ್ತ ಸಹಾಯಕ ಮೋಗಣ್ಣ ಫೈಲ್ ಮತ್ತು ಹಣ ಕಳೆದುಕೊಂಡ ಅಪ್ತ ಸಹಾಯಕ. ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಬ್ಯಾಗ್ ಇಟ್ಟು ತೆರಳಿದ್ದಾಗ ಕಳ್ಳರ ಕೈಚಳಕ ಪ್ರದರ್ಶಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸಿಸಿ ಕ್ಯಾಮರಾಗಳು ಕೆಟ್ಟು ಹೋಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.