ಆಗುಂಬೆ ಘಾಟ್ ರಸ್ತೆಯಲ್ಲಿ ಬಿರುಕು ; ನಾಳೆಯಿಂದ ಭಾರಿ ವಾಹನ ಸಂಚಾರ ನಿಷೇಧ ! ಪರ್ಯಾಯ ಮಾರ್ಗ ಯಾವುದು ಗೊತ್ತಾ ?

0 66

ತೀರ್ಥಹಳ್ಳಿ : ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದಾಗಿ ಸೆಪ್ಟೆಂಬರ್‌ 15 ರ ವರೆಗೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.


ಭಾರೀ ಮಳೆ ಮತ್ತು ಭಾರೀ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ಧಾರಿ 169 A ಯ ಆಗುಂಬೆ ಘಾಟಿಯ 6,7 ಮತ್ತು 11 ನೇ ತಿರುವಿನಲ್ಲಿ ಸಣ್ಣ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಆತಂಕ ಉಂಟಾಗಿದೆ. ಆದ್ದರಿಂದ ಜುಲೈ 27 ರಿಂದ ಸೆಪ್ಟೆಂಬರ್‌ 15 ರ ವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿರುವುದರಿಂದ ತೀರ್ಥಹಳ್ಳಿ – ಉಡುಪಿ ಮಧ್ಯೆ ಸಂಚರಿಸುವ ಭಾರೀ ವಾಹನಗಳು ಈ ಕೆಳಗಿನ ಬದಲಿ ಮಾರ್ಗವನ್ನು ಆಯ್ದುಕೊಳ್ಳಬಹುದು ಎಂದು ಪ್ರಕಟನೆ ಹೊರಡಿಸಿದ್ದಾರೆ.

ಮಾರ್ಗ 1. ತೀರ್ಥಹಳ್ಳಿ – ಆಗುಂಬೆ – ಶೃಂಗೇರಿ – ಮಾಳಘಾಟ್‌ – ಕಾರ್ಕಳ – ಉಡುಪಿ.

ಮಾರ್ಗ 2. ತೀರ್ಥಹಳ್ಳಿ – ಮಾಸ್ತಿಕಟ್ಟೆ – ಸಿದ್ದಾಪುರ – ಕುಂದಾಪುರ – ಉಡುಪಿ.

Leave A Reply

Your email address will not be published.

error: Content is protected !!