Chikkamagaluru ; ನೂತನ‌ ಜಿಲ್ಲಾಧಿಕಾರಿ‌ಯಾಗಿ ಮೀನಾ ನಾಗರಾಜ್ ನೇಮಕ

0 65

ಚಿಕ್ಕಮಗಳೂರು : ನೂತನ‌ ಜಿಲ್ಲಾಧಿಕಾರಿ‌ಯಾಗಿ ಮೀನಾ ನಾಗರಾಜ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಕೆ.ಎನ್.ರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ.

ಮೀನಾ ನಾಗರಾಜ್,‌ ಈ ಹಿಂದೆ ಮಾಹಿತಿ ತಂತ್ರಜ್ಞಾನ ಮತ್ತು ಬಯೋ ಟೆಕ್ನಾಲಜಿ ಸಂಸ್ಥೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

ಜಿ.ಪಂ.ಸಿಇ ಜಿ.ಪ್ರಭು ಅವರನ್ನು ತುಮಕೂರು ಜಿಲ್ಲೆ ಜಿ.ಪಂ.ಸಿಇಓ ಆಗಿ ವರ್ಗಾವಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿ.ಪಂ.ಸಿಇಓ ಹುದ್ದೆ ಕಾಯ್ದಿರಿಸಲಾಗಿದೆ.

Leave A Reply

Your email address will not be published.

error: Content is protected !!