ಹೊಸನಗರದಲ್ಲಿ ಜ.4 ರಂದು ತಾಲ್ಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

0 499

ಹೊಸನಗರ : ತಾಲ್ಲೂಕಿನ ಹೊಸನಗರ ಮಾವಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಡಾ. ಪಿ. ಶಾಂತರಾಮ್ ಪ್ರಭು ವೇದಿಕೆಯಲ್ಲಿ ಜನವರಿ 4 ಗುರುವಾರ ಹೊಸನಗರ ತಾಲ್ಲೂಕು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಲಿದೆ ಎಂದು ಹೊಸನಗರ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ಅಧ್ಯಕ್ಷ  ನಗರ ರಾಘವೇಂದ್ರ ತಿಳಿಸಿದ್ದಾರೆ.


ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ತಾಲ್ಲೂಕಿನ 41 ಪ್ರೌಢ ಶಾಲೆ ವಿದ್ಯಾರ್ಥಿಗಳು ಹಾಗೂ 7ನೇ ತರಗತಿ ವಿದ್ಯಾರ್ಥಿಗಳು ಸಾಹಿತ್ಯ ಸಮ್ಮೇಳನದಲ್ಲಿ ಕ್ಷೇತ್ರ ಶಿಕ್ಷಣಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಪಾಲ್ಗೋತ್ತಿದ್ದಾರೆ.

ಕ್ಷೇತ್ರದ ಶಾಸಕರಾದ ಬೆಳೂರು ಗೋಪಾಲಕೃಷ್ಣ ಬೇಳೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಿ ಮಂಜುನಾಥ, ಕಸಾಪ ಅಧ್ಯಕ್ಷ ತ.ಮ. ನರಸಿಂಹ, ಜಾನಪದ ಪರಿಷತ್ ಅಧ್ಯಕ್ಷ ಪರಮೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುರುರಾಜ್ ಪರಿಸಾರ ಪ್ರೇಮಿ  ನಿಂಗಮೂರ್ತಿ, ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ  ಸಮ್ಮೇಳನ ನಡೆಯಲಿದೆ.

ಬೆಳ್ಳಿಗೆ 9:30 ಕ್ಕೆ ಸಮ್ಮೇಳನಾಧ್ಯಕ್ಷರು ಹಾಗೂ ಕಾರ್ಯಕ್ರಮ ಉದ್ಘಾಟಕರನ್ನು  ಶ್ರೀ ಗಂಗಾಧರೆಶ್ವರ ದೇವಸ್ಥಾನದಿಂದ ಚರ್ಮ ವಾದ್ಯಳೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಗುವುದು, ಸಾರ್ವಜನಿಕರು, ಸಾಹಿತ್ಯ ಆಸಕ್ತರು, ಕನ್ನಡ ಪರ ಸಂಘಟನೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಳಬೇಕಾಗಿ ತಿಳಿಸಿದ್ದಾರೆ.

ಗೋಷ್ಠಿಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗುರುರಾಜ್, ಮುಖ್ಯ ಶಿಕ್ಷಕ ಕುಬೇಂದ್ರಪ್ಪ, ಎಂ.ಕೆ ವೆಂಕಟೇಶ್ ಮೂರ್ತಿ, ಮಾಸ್ತಿಕಟ್ಟೆ ವಾಸಪ್ಪ, ಗೌತಮ್ ಆಚಾರ್ಯ, ಪ್ರಕಾಶ್ ಸೇರಿದಂತೆ ಕ.ಸಾ.ಸ. ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!