ಹಾವು ಕಚ್ಚಿ ಗ್ರಾ.ಪಂ ಸದಸ್ಯನ ಪುತ್ರಿ ಸಾವು !
ತೀರ್ಥಹಳ್ಳಿ: ಹಾವು ಕಚ್ಚಿ ಮೇಲಿನಕುರುವಳ್ಳಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಪೂಜಾರಿ ಅವರ ಪುತ್ರಿ ಪೂರ್ಣಿಮಾ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಹಾವು ಕಚ್ಚಿದ ತಕ್ಷಣವೇ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪೂರ್ಣಿಮಾ ಸಾವನ್ನಪ್ಪಿದ್ದಾರೆ.
ಮೃತದೇಹವನ್ನು ಮೇಲಿನಕುರುವಳ್ಳಿಯ ಅವರ ಸ್ವಗೃಹದಲ್ಲಿ ಇಡಲಾಗಿದ್ದು ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.