ಬತ್ತಿದ ಜಲ ಮೂಲಗಳು ; ರಣ ಬಿಸಿಲಿಗೆ ತತ್ತರಿಸಿದ ಮಲೆನಾಡ ಜನತೆ, ನೀರಿಗಾಗಿ ಹಾಹಾಕಾರ

0 28

ರಿಪ್ಪನ್‌ಪೇಟೆ: ನಡು ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೀವನಾಡಿಯಾಗಿರುವ ಶರಾವತಿ, ಕುಮುದ್ವತಿ, ಶರ್ಮಿಣ್ಯಾವತಿ, ಶರ್ಮಾಣಾವತಿ ನದಿಗಳು ಮಳೆಗಾಲದಲ್ಲಿ ಉಕ್ಕಿ ಹರಿಯುತ್ತಿದ್ದು ಈಗ ಬೇಸಿಗೆಯಲ್ಲಿ ಸಂಪೂರ್ಣವಾಗಿ ಬತ್ತಿ ಹೋಗಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಎದುರಾಗಿದ್ದು ಆಡಿಕೆ ತೋಟಗಳು ಸಹ ಒಣಗಿ ಹೋಗುತ್ತಿದ್ದು ಜನತೆ ತತ್ತರಿಸಿ ಹೋಗಿದೆ.

ನಡು ಮಲೆನಾಡಿನಲ್ಲಿ ಬೇಸಿಗೆ ಬಿಸಿಲ ತಾಪಮಾನ 37-38 ಡಿಗ್ರಿಯಷ್ಟು ತಲುಪಿದ್ದು ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದಾರೆ. ಕುಡಿಯಲು ನೀರಿಲ್ಲದೆ ಪರಿತಪಿಸುವಂತಹ ಸ್ಥಿತಿಯಲ್ಲಿ ರೈತರು ತಮ್ಮ ಜೀವನಾಡಿಯಾದ ಅಡಿಕೆ ತೋಟವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ, ಬಾಳೂರು, ಕೆಂಚನಾಲ, ಅರಸಾಳು, ಬೆಳ್ಳೂರು, ಹೆದ್ದಾರಿಪುರ, ಅಮೃತ, ಹುಂಚ, ಕೋಡೂರು, ಸೊನಲೆ, ಹರತಾಳು ಇನ್ನಿತರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ನಾಗರೀಕರು ಪರದಾಡುವ ಸ್ಥಿತಿ ಹೇಳದಂತಾಗಿದೆ.

ಇತ್ತೀಚೆಗೆ ಬಾಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಂದಾಳದಿಂಬ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿಯಲ್ಲಿ ಪಂಚಾಯ್ತಿಗೆ ಸಾರ್ವಜನಿಕರು ಮನವಿ ಮಾಡಿಕೊಂಡ ಪರಿಣಾಮ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿದ್ದು ಕಲುಷಿತ ನೀರು ಸರಬರಾಜಿನಿಂದಾಗಿ ಪ್ರತಿಭಟನೆ ಸಹ ನಡೆದಿರುವ ಬೆನ್ನಲೇ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬರುವೆ, ಗವಟೂರು, ವಿನಾಯಕನಗರ, ಬನ್ನಿನಗರ, ಶಬರೀಶ್‌ನಗರ, ನೆಹರು ಬಡಾವಣೆ, ಶ್ರೀರಾಮನಗರ, ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬುಕ್ಕಿವರೆ, ದೋಬೈಲು, ಕಳಸೆ, ನರ‍್ಲಿಗೆ, ತಳಲೆ, ಹಾರಂಬಳ್ಳಿ, ಕಲ್ಲೂರು, ಕಣಬಂದೂರು ಮೂಗುಡ್ತಿ ಇನ್ನಿತರ ಕಡೆಯಲ್ಲಿ ಕುಡಿಯುವ ನೀರಿನ ತೆರೆದ ಬಾವಿಗಳು ತಳಕಾಣುವಂತಾಗಿದ್ದು ಬೋರ್‌ವೆಲ್‌ಗಳಲ್ಲಿ ಸಹ ಅಂತರ್ಜಲ ಇಲ್ಲದೆ ನೀರಿಗಾಗಿ ರೈತರು ಪರಿತಪಿಸುತ್ತಿದ್ದು ಅಡಿಕೆ ತೋಟಕ್ಕೆ ನೀರು ಇಲ್ಲದೆ ಮರಗಳು ಒಣಗುತ್ತಿವೆ ಎಂದು ನೋವಯನ್ನು ಮಾಧ್ಯಮದವರ ಬಳಿ ತೊಡಿಕೊಂಡರು.

Leave A Reply

Your email address will not be published.

error: Content is protected !!