ಬಾವಿಗೆ ಹಾರಿ ಮಂಡಲ ಪಂಚಾಯತ್ ಮಾಜಿ ಉಪಪ್ರಧಾನ ಆತ್ಮಹತ್ಯೆ !

0 752

ರಿಪ್ಪನ್‌ಪೇಟೆ: ಮಂಡಲ ಪಂಚಾಯತ್ ಮಾಜಿ ಉಪಪ್ರಧಾನ ಹಾಗೂ ಬಸವೇಶ್ವರ ವೀರಶೈವ ಸಮಾಜದ ಸ್ಥಳದಾನಿ ಡಿ.ಸಿ ಈಶ್ವರಪ್ಪ (76) ಇಂದು ಬೆಳಗ್ಗೆ ತಮ್ಮ ಮನೆಯ ಬಳಿಯಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇತ್ತೀಚೆಗೆ ಪತ್ನಿ ಸಾವಿನಿಂದ ಮಾನಸಿಕವಾಗಿ ನೊಂದಿದ್ದ ಈಶ್ವರಪ್ಪ ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರಿಗೆ ಮೂವರು ಪುತ್ರರಿದ್ದು ಅಂತ್ಯಕ್ರಿಯೆ ಬರುವೆ ಗ್ರಾಮದ ದೊಡ್ಡಿನಕೊಪ್ಪದ ಜಮೀನಿನಲ್ಲಿ ವೀರಶೈವ ಜನಾಂಗದ ಸಂಪ್ರದಾಯದಂತೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ:
ಡಿ.ಸಿ ಈಶ್ವರಪ್ಪನವರ ಅಕಾಲಿಕ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿ.ಪಂ
ಮಾಜಿ ಸದಸ್ಯ ಬಂಡಿ ರಾಮಚಂದ್ರ, ರೋಟರಿ ಕ್ಲಬ್ ಎಂ.ಬಿ.ಲಕ್ಷ್ಮಣ ಗೌಡ, ಬಸವೇಶ್ವರ ವೀರಶೈವ ಸಮಾಜದ ಉಪಾದ್ಯಕ್ಷ ಜಿ.ಎಂ.ದುಂಡರಾಜಪ್ಪಗೌಡ, ಎಂ.ಆರ್.ಶಾಂತವೀರಪ್ಪಗೌಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.

error: Content is protected !!