ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

0 221

ರಿಪ್ಪನ್‌ಪೇಟೆ : ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು.

ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ತರುವುದರೊಂದಿಗೆ ಸಾಕಷ್ಟು ಅಭಿವೃದ್ದಿಪಡಿಸಿದ್ದಾರೆ. ತಾಳುಗುಪ್ಪ – ಸಾಗರ – ಶಿವಮೊಗ್ಗ – ಬೆಂಗಳೂರು – ಮೈಸೂರು ಇಂಟರ್ ಸಿಟಿ ರೈಲು ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ನಿಲುಗಡೆ ಮಾಡುವುದರೊಂದಿಗೆ ಬಹುವರ್ಷದ ಬೇಡಿಕೆ ಸ್ಪಂದಿಸಿ ಈ ಮಲೆನಾಡಿನ ಭಾಗದ ರೈಲ್ವೆ ಪ್ರಯಣಿಕರಿಗೆ ಹೆಚ್ಚು ಅನುಕೂಲ ಕಲ್ಪಿಸಿರುವುದು. ಸಾಮಾನ್ಯ ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಮೂಲಕ ಜನಾನುರಾಗಿಯಾಗಿರುವ ರಾಘಣ್ಣ ಈ ಬಾರಿಯೂ ಹೆಚ್ಚಿನ ಮತಗಳ ಅಂತರದಿಂದ ಜಯಭೇರಿ ಬಾರಿಸಲು ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸುತ್ತಿದ್ದು ಮತದಾರರಿಗೆ ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ಕೆರೆಹಳ್ಳಿ ಬೂತ ಅಧ್ಯಕ್ಷರಾದ ಈಶ್ವರರಾವ್, ಕೇತಾರ್ಜಿರಾವ್, ಮುರುಳಿ ಕೆರೆಹಳ್ಳಿ, ಕುಸುಮಾ, ರೇಣುಕಾಬಾಯಿ
ಲಕ್ಷ್ಮಿ, ಗೀತಾ, ಪುಪ್ಪಾವತಿ, ಅರ್ಜುನ, ಗಂಗಮ್ಮ, ಇನ್ನಿತರ ಕಾರ್ಯಕರ್ತರ ತಂಡ ಕೆರೆಹಳ್ಳಿಯ ವ್ಯಾಪ್ತಿಯ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ನಡೆಸಿದರು.

Leave A Reply

Your email address will not be published.

error: Content is protected !!