CRIME NEWS | ಅಡಿಕೆ, ರಬ್ಬರ್ ಶೀಟ್ ಕದ್ದು ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅಂದರ್ !
ರಿಪ್ಪನ್ಪೇಟೆ : ಒಣಗಿಸಿ ಇಟ್ಟ ಅಡಿಕೆ (Arecanut) ರಬ್ಬರ್ ಶೀಟ್ (Rubber Sheets) ಕದ್ದು (Theft) ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ರಿಪ್ಪನ್ಪೇಟೆ (Ripponpet) ಪೊಲೀಸರು (Police) ಯಶಸ್ವಿಯಾಗಿದ್ದಾರೆ.
ಆರೋಪಿಗಳಾದ ಪ್ರವೀಣ್ ಶಿವಪುರ, ನಾಗಭೂಷಣ್ ಅಲಿಯಾಸ್ ನಾಗ ಶಿವಪುರ ಮತ್ತು ಪ್ರತಾಪ್ ಬಂಧಿತ ಆರೋಪಿಗಳು.
ಕಳೆದ ತಿಂಗಳು ನಡೆದ ಕಳ್ಳತನದ ಪ್ರಕರಣವನ್ನು ಬೆನ್ನತ್ತಿದ್ದ ಪಿಎಸ್ಐ ಪ್ರವೀಣ್ ಎಸ್.ಪಿ. ನೇತೃತ್ವದ ಸಿಬ್ಬಂದಿಗಳ ತಂಡ ನ. 27 ರಂದು ಪೊಲೀಸರಿಗೆ ತಲೆ ನೋವಾಗಿದ್ದ ಬೃಹತ್ ಕಳ್ಳರ ಜಾಲವೊಂದನ್ನು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದರು. ಆದರೆ ಈ ಪ್ರಕರಣದಲ್ಲಿ ಬೇಕಾಗಿದ್ದ ಪ್ರಮುಖ ಆರೋಪಿಗಳು ಪರಾರಿಯಾಗಿದ್ದರು.
ಪರಾರಿಯಾಗಿದ್ದ ಕಳ್ಳರ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಗುರುವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣದ ಮೂರನೇ ಆರೋಪಿ ಪ್ರತಾಪ್ ನನ್ನು ಹಾಗೂ ಎರಡನೇ ಮತ್ತು ನಾಲ್ಕನೇ ಆರೋಪಿಗಳಾದ ಪ್ರವೀಣ್ ಶಿವಪುರ ಹಾಗೂ ನಾಗಭೂಷಣ್ ನನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಎರಡನೇ ಆರೋಪಿ ಪ್ರವೀಣ್ ಶಿವಪುರ ಮನೆ ಕಳ್ಳತನ ಮಾಡಿ ಕಳೆದ ನಾಲ್ಕೈದು ತಿಂಗಳಿನಿಂದ ತಲೆಮರೆಸಿಕೊಂಡಿದ್ದನು ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಈಗಾಗಲೇ ರಾಘವೇಂದ್ರ ಅಲಿಯಾಸ್ ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಿ ಅಂದಾಜು 01 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಅಡಿಕೆ ಹಾಗೂ 50 ಸಾವಿರಕ್ಕೂ ಹೆಚ್ಚು ಮೌಲ್ಯದ ರಬ್ಬರ್ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಅಮಾನತುಪಡಿಸಿಕೊಳ್ಳಲಾಗಿತ್ತು.
ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಶಿವಕುಮಾರ್ ನಾಯ್ಕ್ , ಉಮೇಶ್ , ಸಂತೋಷ್ ಕೊರವರ ಮತ್ತು ಮಧುಸೂಧನ್ ಪಾಲ್ಗೊಂಡಿದ್ದರು.