Featured

ಭಾಗ್ಯಲಕ್ಷ್ಮಿ ಬಾಂಡ್ ಇದ್ದವರ ಖಾತೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಲಿದೆ 1 ಲಕ್ಷ ಹಣ !

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಹೆಣ್ಣು ಮಗುವಿಗೆ ಭರ್ಜರಿ ಉಡುಗೊರೆಯನ್ನು ನೀಡುತ್ತಿದೆ. ಹೌದು, ನೀವು ಕೇಳುತ್ತಿರುವುದು ಸತ್ಯ. ಕರ್ನಾಟಕ ರಾಜ್ಯಾದ್ಯಂತ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮಗು ಹುಟ್ಟಿದರೆ ತಕ್ಷಣ ಬಿಪಿಎಲ್ ಕಾರ್ಡ್ ಪಡಿತರ ಚೀಟಿದಾರರು ಅಂದ್ರೆ ಬಡ ಕುಟುಂಬಗಳು ಹೆಣ್ಣು ಮಗುವಿನ ಹೆಸರಿನ ಮೇಲೆ ಭಾಗ್ಯಲಕ್ಷ್ಮಿ ಬಾಂಡ್ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

Read More:Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಗೊತ್ತಾ ?

ಈ ಭಾಗ್ಯಲಕ್ಷ್ಮಿ ಬಾಂಡ್ ಪ್ರತಿ ಹುಡುಗಿಯ ಪೋಷಕರ ಖಾತೆಗೆ ಜಮೆಯಾಗುತ್ತದೆ. ₹1,00,000 ಈ ಹಿಂದೆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಬಿ ಎಸ್ ಯಡಿಯೂರಪ್ಪನವರು ಹೆಣ್ಣು ಮಗುವಿನ ಶಿಕ್ಷಣ ಮತ್ತು ಮದುವೆಗಾಗಿ ಜಾರಿಗೊಳಿಸಿರು

ಭಾಗ್ಯಲಕ್ಷ್ಮಿ ಯೋಜನೆಯ ಅವಧಿಯಲ್ಲಿ ಹೆಣ್ಣು ಮಕ್ಕಳ ಮದುವೆ ಮತ್ತು ಶಿಕ್ಷಣಕ್ಕಾಗಿ ಭಾಗ್ಯಲಕ್ಷ್ಮಿ ಬಾಂಡ್‌ಗಳನ್ನು ವಿತರಿಸಲಾಯಿತು. 18 ವರ್ಷಗಳ ನಂತರ ಪೂರ್ಣಗೊಂಡಿತು. ರಾಜ್ಯದಲ್ಲಿ 18 ವರ್ಷಗಳ ಹಿಂದೆ ಜಾರಿಗೆ ತಂದಿದ್ದ ಈ ಭಾಗ್ಯಲಕ್ಷ್ಮಿ ಯೋಜನೆಯಡಿ ಹೆಣ್ಣು ಮಗು ಜನಿಸಿದ ನಂತರ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಜಾರಿಗೊಳಿಸಲಾಗಿತ್ತು.

ಆ ಯೋಜನೆಯ ಹಣವನ್ನು ಮಗುವಿನ ವಯಸ್ಸು 18 ವರ್ಷದ ನಂತರ ಪೂರ್ಣ ಹಣವನ್ನು ನೀಡಲಾಗುತ್ತೆ. ಈಗ ಈ ಯೋಜನೆ ಜಾರಿಗೊಳಿಸಿ 18 ವರ್ಷ ಭರ್ತಿಯಾಗಿದೆ. ಈ ಯೋಜನೆ ಅಡಿಯಲ್ಲಿ ನೋಂದಣಿ ಆಗಿರುವಂತಹ ಎಲ್ಲಾ ಹೆಣ್ಣು ಮಕ್ಕಳ ವಯಸ್ಸು 18 ವರ್ಷ ತುಂಬಿರುವ ಹಿನ್ನೆಲೆಯಲ್ಲಿ.ಆ ಮಕ್ಕಳಿಗೆ ಈಗ 1 ಲಕ್ಷ ರೂಪಾಯಿ ಹಣವನ್ನು ಒದಗಿಸಲಾಗುತ್ತದೆ. ನೀವು ಕೂಡ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯ ಫಲಾನುಭವಿಯಾಗಿದ್ದರೆ ತಂದೆ ತಾಯಿಗಳು ಈ ಹಣವನ್ನ ಪಡೆದುಕೊಳ್ಳಲು ಎಲ್ಲಿ ಹೋಗಬೇಕು, ಏನ ದಾಖಲಾತಿಗಳನ್ನ ಸಲ್ಲಿಸಬೇಕು ಎನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಲು ಸಂಪೂರ್ಣ ಓದಿ

ಭಾಗ್ಯಲಕ್ಷ್ಮಿ ಬಾಂಡ್

ಏಪ್ರಿಲ್ ಮತ್ತು ಮೇ ತಿಂಗಳ ಅಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿಟಿ ಅರ್ಹರಾಗಿದ್ದು, ಈ ಹಣವನ್ನ ಇನ್ನೆರಡು ತಿಂಗಳಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಆದ್ಯತೆ ಮೇರೆಗೆ ಜಮೆ ಆಗಲಿದೆ. ಈಗಾಗಲೇ ಅಗತ್ಯ ದಾಖಲಾತಿಗಳನ್ನ ಇಲಾಖೆಯು ಪಡೆಯಲು ಮುಂದಾಗಿದೆ.

ಈ ಮಗುವಿಗೆ 18 ವರ್ಷ ಪೂರ್ಣಗೊಂಡ ನಂತರ ಬಡ್ಡಿಸಹಿತ ಹಣ ನೀಡುವಂತಹ ಉದ್ದೇಶದಿಂದ 2006 ರಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮಿ ಯೋಜನೆಗೆ ಪ್ರಸ್ತುತವಾಗಿ 18 ವರ್ಷವಿರುವಂತಹ ಹಿನ್ನೆಲೆ ಎಲ್ಲ ತಾಲೂಕುಗಳ ಸಿಡಿಪಿಒ ಇಲಾಖೆಯು ಪರಿಪಕ್ವ ಹಣ ನೀಡಲು ಈಗಾಗಲೇ ಅರ್ಹರಿಂದ ಅರ್ಜಿ ಮತ್ತು ಅಗತ್ಯ ದಾಖಲಾತಿಗಳನ್ನ ಸಂಗ್ರಹಿಸುತ್ತಿದೆ. ಈ ಯೋಜನೆಯ ಹಣ ಪಡೆಯಲು ಬಿಪಿಎಲ್ ಕಾರ್ಡ್ ಶಾಶ್ವತ ಕುಟುಂಬಯೋಜನೆ ಅಡಿಯಲ್ಲಿ ಅಳವಡಿಸಿಕೊಂಡಿರುವ ಮೂರು ಮಕ್ಕಳು ಮಿತಿ ಮೀರದಂತೆ ಇರಬೇಕು. ಫಲಾನುಭವಿ ಮಗು ಕಡ್ಡಾಯವಾಗಿ ಎಂಟನೇ ತರಗತಿ ವಿದ್ಯಾಭ್ಯಾಸ ಮಾಡಿದ ದೃಢೀಕರಣ ಪತ್ರ, ಬಾಲಕಾರ್ಮಿಕ ಬಾಲ್ಯವಿವಾಹಕ್ಕೆ ಒಳಗಾಗಿರಬಾರದು ಎನ್ನುವಂತಹ ನಿಯಮಕ್ಕೆ ಬದ್ಧರಾಗಿರುವ ಹೆಣ್ಣು ಮಕ್ಕಳಿಗೆ ಮಾತ್ರ ಈ ಒಂದು ಹಣ ದೊರೆಯಲಿದೆ.

Read More :Ration Card | ಹೊಸ ರೇಷನ್ ಕಾರ್ಡ್ ಅಥವಾ ತಿದ್ದುಪಡಿಗೆ ಅರ್ಜಿ ಪ್ರಾರಂಭ !ಅರ್ಜಿ ಸಲ್ಲಿಸುವುದು ಹೇಗೆ ?

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650