ಮೂಡಿಗೆರೆ ; ಹೃದಯಾಘಾತಕ್ಕೆ 15 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿಂದು ನಡೆದಿದೆ.
ಪ್ರೀತಮ್ (15) ಮೃತ ಬಾಲಕ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ನಂತರ ಪ್ರೀತಮ್ ನನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವೈದ್ಯರ ಪ್ರಕಾರ, ಸಾವಿಗೆ ಹೃದಯಾಘಾತವೇ ಕಾರಣವಾಗಿದೆ ಎನ್ನಲಾಗಿದೆ.
ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.