ಹೊಸನಗರ

ಹೊಂಬುಜಕ್ಕೆ 150 ಮಂದಿ ಭಕ್ತರ ಪಾದಯಾತ್ರೆ : ಧರ್ಮಾನುಷ್ಠಾನದಿಂದ ಆತ್ಮೋನ್ನತಿಗೆ ಶ್ರೀಗಳ ಕರೆ

InShot 20260904 191740744

ರಿಪ್ಪನ್‌ಪೇಟೆ: ಭಕ್ತಿ ಮತ್ತು ಶ್ರದ್ಧೆಯಿಂದ ಕೈಗೊಳ್ಳುವ ಪಾದಯಾತ್ರೆ ಧಾರ್ಮಿಕ ಚಿಂತನೆಗೆ ಪ್ರೇರಣೆ ನೀಡುವುದರ ಜತೆಗೆ ಆತ್ಮೋನ್ನತಿಗೆ ಸಹಕಾರಿಯಾಗುತ್ತದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಂಬುಜ ಜೈನ ಮಠದಲ್ಲಿ ಶುಕ್ರವಾರ ನಡೆದ ವಿಶೇಷ ಪೂಜೆ ಹಾಗೂ ಭೋಜನ ಸೇವೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿ, ಐನಾಪುರ, ಅಥಣಿ, ಶಿರಹಟ್ಟಿ ಹಾಗೂ ಶೇಡಬಾಳ ಭಾಗಗಳಿಂದ ಸುಮಾರು 150 ಮಂದಿ ಶ್ರಾವಕರು ಪಾದಯಾತ್ರೆ ಮೂಲಕ ಹೊಂಬುಜಕ್ಕೆ ಆಗಮಿಸಿದರು. ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಅಭೀಷ್ಟವರ ಪ್ರದಾಯಿನಿ ಶ್ರೀ ಪದ್ಮಾವತಿ ದೇವಿಯ ದರ್ಶನ ಪಡೆಯಲು ಆಗಮಿಸಿದ ಭಕ್ತರನ್ನು ಶ್ರೀಮಠದ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ನಿತ್ಯ ದೇವರ ಸ್ತೋತ್ರ ಪಠಣ, ಸ್ವಾಧ್ಯಾಯ ಹಾಗೂ ಧಾರ್ಮಿಕ ಕ್ಷೇತ್ರಗಳ ದರ್ಶನದಿಂದ ಮನಸ್ಸಿನ ಒತ್ತಡ ಮತ್ತು ಕ್ಲೇಶಗಳು ಕಡಿಮೆಯಾಗುತ್ತವೆ ಎಂದು ಹೇಳಿ, ಧಾರ್ಮಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಜೈನ ಧರ್ಮದ ತತ್ವಗಳನ್ನು ವಿವರಿಸಿದ ಅವರು, ಸದೃಢ ಮತ್ತು ಸಂಸ್ಕಾರಯುತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಸಂಕಲ್ಪ ಮಾಡಬೇಕು ಎಂದ ಶ್ರೀಗಳು, ಕಳೆದ 14 ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆ ನಡೆಸುವ ಮೂಲಕ ಧಾರ್ಮಿಕ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ತಿಳಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾರ್ಯಕ್ರಮದಲ್ಲಿ ಪೂಜೆ ಹಾಗೂ ಭೋಜನ ಸೇವೆಯ ಕರ್ತೃಗಳಾದ ಹೊಂಬುಜ ಪಾದಯಾತ್ರೆ ಸಂಘ, ಐನಾಪುರ ಮತ್ತು ಶಿರಹಟ್ಟಿ, ಶ್ರೀಮತಿ ಪದ್ಮಶ್ರೀ ಹಾಗೂ ಶ್ರೀ ಮಹಾವೀರ ವಸಂತ ನಿಲಜಗಿ, ಮಹಾವೀರ ಉದ್ಯೋಗ ಸಂಸ್ಥೆ, ಹುಕ್ಕೇರಿ ಸೇರಿದಂತೆ ಬೆಳಗಾವಿ ಜಿಲ್ಲೆಯ ಭಕ್ತ ಪರಿವಾರದವರಿಗೆ ಶ್ರೀಗಳು ಆಶೀರ್ವದಿಸಿದರು.

ಇದೇ ಸಂದರ್ಭದಲ್ಲಿ ಸಿರಿಧಾನ್ಯ, ನವಧಾನ್ಯ ಹಾಗೂ ವಿವಿಧ ಸವಿ ನೈವೇದ್ಯಗಳನ್ನು ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಸಮರ್ಪಿಸಲಾಯಿತು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]