ಸೊರಬ ತಾಲ್ಲೂಕಿನ ಉದ್ರಿ ವಡ್ಡಿಗೇರಿ ನಿವಾಸಿ ಹನುಮಂತರಪ್ಪ ಅವರ ಪುತ್ರಿ ಶಶಿಕಲಾ (17) ಎಂಬ ಯುವತಿ ಫೆಬ್ರವರಿ 01ರಂದು ಮನೆ ಬಳಿಯ ಗೇಟ್ ಬಳಿ ಹೋಗಿ ಬರುತ್ತೇನೆಂದು ಹೇಳಿ ಹೊರಟು, ಈವರೆಗೂ ಮನೆಗೆ ವಾಪಾಸಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಶಶಿಕಲಾಳ ಗುರುತುಚಿಹ್ನೆಗಳು:
- ಎತ್ತರ: ಸುಮಾರು 4.8 ಅಡಿ
- ಮುಖ: ದುಂಡುಮುಖ
- ವರ್ಣ: ಕಪ್ಪು
- ಮೈಕಟ್ಟು: ಸಾಧಾರಣ
- ವಸ್ತ್ರ: ಮನೆಯಿಂದ ಹೊರಡುವಾಗ ಕಪ್ಪು ಬಣ್ಣದ ಚೂಡಿದಾರ್
ಈ ಯುವತಿಯನ್ನು ಯಾರಾದರೂ ಕಂಡುಬಂದಲ್ಲಿ ಕೆಳಗಿನ ದೂರವಾಣಿ ಸಂಖ್ಯೆಗಳ ಮೂಲಕ ತಕ್ಷಣ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ಮನವಿ ಮಾಡಿದೆ:
- ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ : 08182-261400
- ಸಾಗರ ಗ್ರಾಮಾಂತರ ಠಾಣೆ (ASP, ಸಾಗರ ಉಪವಿಭಾಗ): 08183-226082
- ಪಿ.ಐ., ಸಾಗರ ಗ್ರಾಮಾಂತರ ಠಾಣೆ: 9480803361
- ಪಿ.ಎಸ್.ಐ., ಸಾಗರ ಗ್ರಾಮಾಂತರ ಪೊಲೀಸ್ ಠಾಣೆ: 9480803385
ಯಾವುದೇ ಸಣ್ಣ ಮಾಹಿತಿಯೂ ಮಹತ್ವದ್ದಾಗಿರಬಹುದು. ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650





