ಹೊಸನಗರ ; ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ 20 ಸಾವಿರ ಲೀ. ಹಾಲು ಮಣ್ಣು ಪಾಲಾದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಮಾರುತಿಪುರ ಸಮೀಪದ ಮಾವಿನಹೊಳೆಯಲ್ಲಿ ನಿನ್ನೆ ನಡೆದಿದೆ.

ಶಿವಮೊಗ್ಗ ಕಡೆಯಿಂದ ಕಾಸರಗೋಡಿಗೆ ತೆರಳುತ್ತಿದ್ದ ಲಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. 20 ಸಾವಿರ ಲೀಟರ್ ಸಾಮರ್ಥ್ಯ ಹೊಂದಿದ್ದ ಟ್ಯಾಂಕರ್ ಲಾರಿ ಪಲ್ಟಿಯಾದ ರಭಸಕ್ಕೆ ಹಾಲು ಹೊಳೆಯಂತೆ ಹರಿಯಿತು. ಘಟನೆಯಲ್ಲಿ ಚಾಲಕ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

