Hosanagara

2024-25ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

HOSANAGARA | ಕೃಷಿ ಕ್ಷೇತ್ರದಲ್ಲಿ ಉತ್ಪಾದಕತೆ ಹೆಚ್ಚಿಸಲು ರೈತರಲ್ಲಿ ಒಂದು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಹೆಚ್ಚಿಸುವ ಹಾಗೂ 2024-25ನೇ ಸಾಲಿನ ‘ಕೃಷಿಪ್ರಶಸ್ತಿ’ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಲುವಾಗಿ ಹೊಸನಗರ ತಾಲ್ಲೂಕಿನ ರೈತ ಬಾಂಧವರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೊಸನಗರ ಸಹಾಯಕ ಕೃಷಿ ನಿರ್ದೇಶಕ ಸಚಿನ್ ಹೆಗಡೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಭಾಗವಹಿಸಲಿಚ್ಚಿಸುವ ರೈತರು “ಭತ್ತದ ಬೆಳೆಯಲ್ಲಿ” ಎಲ್ಲಾ ಮಟ್ಟಗಳಿಗೂ ಅನ್ವಯವಾಗುವಂತೆ (ರಾಜ್ಯ/ ಜಿಲ್ಲಾ/ ತಾಲ್ಲೂಕು) ಏಕರೂಪದ ಅರ್ಜಿಯನ್ನು ಆನ್‌ಲೈನ್ ಮುಖಾಂತರ ಆ.31ರೊಳಗೆ ಸಲ್ಲಿಸಲು ಕೋರಿದೆ.

ಅರ್ಜಿ ಸಲ್ಲಿಸಲಿಚ್ಚಿಸುವ ರೈತರು ಕನಿಷ್ಠ ಒಂದು ಎಕರೆ ಭತ್ತವನ್ನು ಬೆಳೆಯುವ ರೈತನಾಗಿರಬೇಕು ಹಾಗೂ ಕಂದಾಯ ಇಲಾಖೆಯ ದಾಖಲೆ ಪ್ರಕಾರ ಖಾತೆ ಹೊಂದಿರುವ ಸ್ವತಃ ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ಕೃಷಿಕನಾಗಿರಬೇಕು. ಸ್ವಂತ ಜಮೀನು ಹೊಂದಿರದಿದ್ದರೂ ಸಹ ಬೇಸಾಯದಲ್ಲಿ ತೊಡಗಿರುವ ಕೃಷಿಕರು ಜಮೀನು ಮಾಲಿಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ (ಜಿಪಿಎ) ಹೊಂದಿದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ವಿಶೇಷ ಸೂಚನೆ :

ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಹಾಗೂ ಇತರ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪ್ರಶಸ್ತಿ ನೀಡಲು ಸರ್ಕಾರವು ಈ ಸಾಲಿನಿಂದ ನಿರ್ಧರಿಸಿದೆ. ಆದ್ದರಿಂದ ರೈತ ಮಹಿಳೆಯರು ಪ್ರಸ್ತುತ ಸಾಲಿನಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>