Chikmagaluru News

ಅರಣ್ಯ ಒತ್ತುವರಿ ; 33 ಎಕರೆ ಕಾಫಿ ತೋಟ ತೆರವು !

ಬಾಳೆಹೊನ್ನೂರು ; ಒತ್ತುವರಿ ಮಾಡಿದ್ದ 33 ಎಕರೆ ಅರಣ್ಯ ಪ್ರದೇಶವನ್ನು ತೆರವು ಮಾಡಿರುವ ಘಟನೆ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಚಿಕ್ಕಮಗಳೂರು ಜಿಲ್ಲೆಯ ಎನ್.‌ಆರ್‌. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ 33 ಎಕರೆ ಒತ್ತುವರಿ ಮಾಡಿ ಕಾಫಿ ಬೆಳೆ ಬೆಳೆಯಲಾಗಿತ್ತು. ಆದರೆ, ಹೈಕೊರ್ಟ್‌ ಆದೇಶ ಮೇರೆಗೆ ಅರಣ್ಯ ಇಲಾಖೆ ವತಿಯಿಂದ 33 ಎಕರೆ ಒತ್ತುವರಿ ಮಾಡಿದ್ದ ಕಾಫಿ ತೋಟವನ್ನು ತೆರವು ಮಾಡಿದ್ದಾರೆ.

ಅರಣ್ಯ ಸಿಬ್ಬಂದಿಗಳಾದ ಎಸಿಎಫ್ ಮೋಹನ್ ಕುಮಾರ್, ಆರ್.ಎಫ್.ಒ. ಮಧುಕರ್, ಡಿ.ಆರ್.ಎಫ್.ಒ. ಆದಿತ್ಯರಾವ್, ಬಿ.ಎಫ್. ಕೃಷ್ಣಮೂರ್ತಿ ಬಾಳೆಹೊನ್ನೂರ್ ಮತ್ತು ಶೃಂಗೇರಿ ವಲಯ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>