ರಿಪ್ಪನ್ಪೇಟೆ ; ಸಮೀಪದ ಬೈರಾಪುರ ಸಿದ್ದಪ್ಪನ ಗುಡಿಯ ಬಳಿಯಲ್ಲಿನ ಕಿರುಮಂತ್ರಾಲಯ ಎಂದೇ ಖ್ಯಾತಿ ಹೊಂದಿರುವ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಹಾಗೂ ಹರತಾಳು ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಗರ್ತಿಕೆರೆಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ಬೆಳಗ್ಗೆ ಗುರುರಾಯರ 354ನೇ ಆರಾಧನಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ನೆರವೇರಿತು.
ಗುರುರಾಯರ ಸನ್ನಿಧಿಯಲ್ಲಿ ಅಷ್ಟೋತ್ತರ ನಾಮ ಪಠಣ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.