ಪೋಷಕರು ಬೈದಿದಕ್ಕೆ ನೇಣಿಗೆ ಶರಣಾದ 3ನೇ ತರಗತಿ ವಿದ್ಯಾರ್ಥಿ !

Written by Mahesha Hindlemane

Published on:

THIRTHAHALLI ; ಪೋಷಕರು ಬೈದಿದಕ್ಕೆ ಮನನೊಂದು 3ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪ್ರೀತಂ (10) ಮೃತ ಬಾಲಕ. ಈತ ಬೆಜ್ಜವಳ್ಳಿಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ. ಭಾನುವಾರ ಸಂಜೆ ಮನೆಯಲ್ಲಿ ಯಾವುದೋ ಕಾರಣಕ್ಕೆ ಪೋಷಕರು ಬೈದಿದ್ದರು ಅದರಿಂದಾಗಿ ಮನನೊಂದು ಪ್ರೀತಂ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ವಿಚಾರದ ಬಗ್ಗೆ ಪೊಲೀಸರು ಕೇಸ್‌ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದು, ಘಟನೆಗೆ ನಿಖರವಾದ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

Leave a Comment