ಹೊಸನಗರ

49 ಲಕ್ಷ ರೂ. ಲಾಭದಲ್ಲಿ ಕೊಡಚಾದ್ರಿ ಅಡಿಕೆ ಸೌಹಾರ್ದ ಸಹಕಾರಿ ಸಂಘ

HOSANAGARA ; ಪ್ರಸಕ್ತ ಸಾಲಿನಲ್ಲಿ ಸಂಸ್ಥೆ 49,24,344 ರೂ‌. ನಿವ್ವಳ ಲಾಭಗಳಿಸಿದ್ದು, ಷೇರುದಾರರಿಗೆ ಶೇ. 8 ಲಾಭಾಂಶ ಘೋಷಿಸಿದೆ ಎಂದು ಕೊಡಚಾದ್ರಿ ಅಡಿಕೆ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅವುಕ ಹೆಚ್.ಎಂ‌. ರಾಘವೇಂದ್ರ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ಗಾಯತ್ರಿ ಮಂದಿರದಲ್ಲಿ ಶುಕ್ರವಾರ ನಡೆದ ಕೊಡಚಾದ್ರಿ ಅಡಿಕೆ ಸೌಹಾರ್ದ ಸಹಕಾರಿ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದುಡಿಯುವ ಬಂಡವಾಳ ಮೀರಿ ಸದಸ್ಯರಿಗೆ ಕೆಲವು ಪ್ರಕರಣಗಳಲ್ಲಿ ಸಾಲ ವಿತರಿಸಲಾಗಿದ್ದು, ಶೀಘ್ರದಲ್ಲಿಯೇ ಸದರಿ ಸಾಲಗಳ ಚುಕ್ತಕ್ಕೆ ಕ್ರಮ ಕೈಗೊಳ್ಳಲಾಗುವುದು. ಷೇರುದಾರರು ಈ ಕುರಿತು ಆತಂಕ ಪಡುವ ಅಗತ್ಯವಿಲ್ಲ ಎಂಬ ಭರವಸೆ ನೀಡಿದರು.

ಈ ಷೇರುದಾರರ ಸಂಖ್ಯೆಯನ್ನು 6 ಸಾವಿರಕ್ಕೆ ಏರಿಸಲಾಗುವುದು. ಸಹಕಾರಿ ವ್ಯವಹಾರಕ್ಕೆ 10 ಕೋಟಿ ರೂ. ಅಗತ್ಯ ಸಾಲವನ್ನು ಡಿಸಿಸಿ ಬ್ಯಾಂಕಿನಿಂದ ಪಡೆಯುವುದಾಗಿ ಸಭೆಗೆ ತಿಳಿಸಿದರು.

ಸಿಇಓ ಎನ್. ಬಿ. ಬಾಲಚಂದ್ರ ಮಾತನಾಡಿ, ಪಟ್ಟಣದ ನೆಹರು ರಸ್ತೆಯ ನೂತನ ಕಟ್ಟಡಕ್ಕೆ ಪ್ರಧಾನ ಕಚೇರಿಯನ್ನು ಸ್ಥಳಾಂತರ ಮಾಡಿ, ಎಪಿಎಂಸಿ ಪ್ರಾಂಗಣದ ಕಟ್ಟಡವನ್ನು ಅಡಿಕೆ ದಲ್ಲಾಳಿ ಮಂಡಿ ವ್ಯಾಪಾರಕ್ಕೆ ಮೀಸಲಿಡಲು ಆಡಳಿತ ಸಮಿತಿ ತೀರ್ಮಾನಿಸಿದೆ. ಆನಂದಪುರ ಎಪಿಎಂಸಿ ಪ್ರಾಂಗಣದಲ್ಲಿ ನೂತನ ಅಡಿಕೆ ದಲ್ಲಾಳಿ ಶಾಖೆ ತೆರೆಯುವುದು ಹಾಗು ಸಾಗರದ ವರದಾ ರಸ್ತೆಯ ಹೆಚ್ಡಿಕೆ ಕಟ್ಟಡದಲ್ಲಿ ತೋಟಗಾರಿಕಾ ಮತ್ತು ಅರಣ್ಯ ಉಪ ಉತ್ಪನ್ನ ನೇರ ಖರೀದಿ ಮತ್ತು ಮಾರಾಟ ಕೇಂದ್ರ ತೆರೆಯಲು ಚಿಂತನೆ ನಡೆದಿದೆ ಎಂದರು.

ಇದಕ್ಕೂ ಮೊದಲು ನಿಧನ ಹೊಂದಿದ ಸಹಕಾರಿ ಸದಸ್ಯ ರೈತರಿಗೆ ಶ್ರದ್ಧಾಂಜಲಿ, ಅವರ ಶೈಕ್ಷಣಿಕ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮಹಾಸಭೆಯ ತಿಳುವಳಿಕೆ ಪತ್ರ ಓದಿ,ಹಾಜರಾತಿ ದೃಢೀಕರಿಸಿದರು. 2023-24ನೇ ಸಾಲಿನ ಆಡಳಿತ – ಲೆಕ್ಕಪರಿಶೋಧನಾ ವರದಿ ಮಂಡನೆ, ಆಯವ್ಯಯ ಪತ್ರ ಅಂಗೀಕಾರ ನಡೆಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷ ವಸವೆ ಈಶ್ವರಪ್ಪ, ನಿರ್ದೇಶಕರಾದ ಹನಿಯ ರವಿ, ಕುಂಬತ್ತಿ ಕೃಷ್ಣಮೂರ್ತಿ, ಹುಲಗಾರು ಜಗದೀಶ್, ದುಮ್ಮ ಗಣಪತಿ, ಬಣ್ಣುಮನೆ ಆದಿತ್ಯ, ಭದ್ರಾಪುರ ರಾಜಶೇಖರ, ನಿವಣೆ ಪ್ರತಿಮಾ ಭಟ್, ವಿದ್ಯಾ ಸಂತೋಷ್ ಪೈ ಇದ್ದರು.

ಸಿಇಒ ಬಾಲಚಂದ್ರ ಸ್ವಾಗತಿಸಿ, ಮರುಡುಮನೆ ಎಂ.ಜಿ.ರಾಮಚಂದ್ರ ನಿರೂಪಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]